ಶುಕ್ರವಾರ, ನವೆಂಬರ್ 4, 2011

ನಮ್ಮ ತ್ಯಾಗದಿಂದಲೇ ಅಲ್ಲವೇ ನಮ್ಮ ಮೆಟ್ರೋ ಓಡುತ್ತಿರುವುದು?

ನಮ್ಮ ಮೆಟ್ರೋನ ಬಗ್ಗೆ ನವಂಬರ್ 3 ರಂದು ಡೆಕನ್ ಹೆರಾರ್ಡ್ ಪತ್ರಿಕೆಯಲ್ಲಿ ಒಂದು ವರದಿ ಪ್ರಕಟವಾಗಿದೆ, ಈ ವರದಿಯ ಪ್ರಕಾರ, ನಮ್ಮ ಮೆಟ್ರೊ, ಬೆಂಗಳೂರು ನಗರ ಪಾಲಿಕೆಯ ಹಲವಾರು ಜಾಗಗಳನ್ನ ಬಿಟ್ಟಿಯಾಗಿ ವಶಪಡಿಸಿಕೊಂಡು ಅಲ್ಲಿ ಕಾಮಗಾರಿಯನ್ನ ನಡೆಸುತ್ತಿದೆ, ಪಾಲಿಕೆಯ ಸುಮಾರು 65 ರಿಂದ 70 ಸಾವಿರ ಅಡಿಗಳಶ್ಟು ಜಾಗ ಮತ್ತು ಅಲ್ಲಿ ಇರುವ ಕಟ್ಟಡ ನಮ್ಮ ಮೆಟ್ರೋ ಪಾಲಾಗಿದೆ. ಈ ಆಸ್ತಿ ನೂರಾರು ಕೋಟಿ ಬೆಲೆಬಾಳುತ್ತದೆ.

ಇವಿಶ್ಟೇ ಅಲ್ಲದೇ ನಮ್ಮ ಮೆಟ್ರೊಗೆಂದು ನಗರದ ಹಲವಾರು ಕಡೆಗಳಲ್ಲಿ ನಮ್ಮ ನಾಡಿನ ಜನರು ಮಾರುಕಟ್ಟೆಯ ದರಕ್ಕಿಂತ ಕಡಿಮೆ ಹಣಕ್ಕೆ ತಮ್ಮ ಜಾಗವನ್ನ ಕೊಟ್ಟಿದ್ದಾರೆ, ಹಲವಾರು ಅಂಗಡಿ ಮುಂಗಟ್ಟುಗಳನ್ನ ನಮ್ಮ ಮೆಟ್ರೋಗೆಂದು ಮುಚ್ಚಿಸಲಾಗಿದೆ. ಬೆಂಗಳೂರಿನಾದ್ಯಂತ ನಡೆಯುತ್ತಿರುವ ಮೇಟ್ರೋ ಕಾಮಗಾರಿಯಿಂದ ಉಂಟಾಗಿರುವ ಟ್ರಾಪಿಕ್ ವೈಪರಿತ್ಯವನ್ನು ದಿನ ನಿತ್ಯ ನಮ್ಮ ಜನ ಅನುಬವಿಸುತ್ತಿದ್ದಾರೆ.. ಇಂತಹ ನಮ್ಮ ನಾಡಿನ ಜನರ ತ್ಯಾಗದಿಂದಲೇ ನಮ್ಮ ಮೆಟ್ರೊ ಬಿಡುಗಡೆಯಾಗಿ ಓಡಾಡಲು ಸಾದ್ಯವಾಗಿರುವುದು ಅಲ್ಲವೇ? ಆದರೆ ಇವ್ಯಾವು ಲೆಕ್ಕಕ್ಕೆ ಇಲ್ಲವೆಂಬಂತೆ ನಮ್ಮ ಮೆಟ್ರೊ ಬೆಂಗಳೂರಿಗರನ್ನ ನಡೆಸಿಕೊಳ್ಳುತ್ತಿರುವುದು ಮಾತ್ರ ದುರಂತವೇ ಸರಿ..

ನಮ್ಮ ನಾಡಿನ ಜನರ ತ್ಯಾಗವಿದ್ದರೂ ಸಹ ನಮ್ಮ ನಾಡಿನ ಬಾಶೆಗೆ ಮನ್ನಣೆ ಸಿಗಬೇಕು, ನಮ್ಮ ನಾಡಿನ ಜನರಿಗೆ ಉದ್ಯೋಗ ಸಿಗಬೇಕು ಎನ್ನುವುದನ್ನ ಬೇಡಿಕೊಳ್ಳುವ ಪರಿಸ್ತಿತಿಯನ್ನ ನಮ್ಮ ಮೆಟ್ರೋ ನ ಅದಿಕಾರಿಗಳು ನಿರ್ಮಿಸಿದ್ದಾರೆ. ನಮ್ಮ ನಾಡಿನ ಜನರ ಬಾಶಾ ಮತ್ತು ಉದ್ಯೋಗದ ಕಳಕಳಿಗೆ, ಮೆಟ್ರೊ ಅದಿಕಾರಿಗಳು ಉದ್ದಟ ತನ ತೋರುತ್ತಿದ್ದಾರೆ ಮತ್ತು ಇದಕ್ಕೆ ಪೂರಕವಾಗಿ ಪರರಾಜ್ಯದಿಂದ ಬಂದು ನಮ್ಮ ಮೆಟ್ರೊನಲ್ಲಿ ಕೆಲಸ ಮಾಡುತ್ತಿರುವರುಗಳು ನಮ್ಮ ನಾಡು ನುಡಿ ವಿರುದ್ದವಾಗಿ ಮಾತನಾಡಿ ನಮ್ಮ ಸ್ವಾಬಿಮಾನವನ್ನ ಕೆರಳಿಸುವಂತೆ ಮಾಡುತ್ತಿದ್ದಾರೆ. ಕನ್ನಡ ವಿರೋದಿ ಮೆಟ್ರೊ ಅದಿಕಾರಿಗಳು ಮತ್ತು ಪರರಾಜ್ಯದಿಂದ ಬಂದು ಕನ್ನಡ ವಿರೋದಿತನ ತೋರುತ್ತಿರುವ ಮೆಟ್ರೊ ಕೆಲಸಗಾರರಿಗೆ ದಿಕ್ಕಾರವಿರಲಿ... ನಮ್ಮ ನಾಡಿನ ಜನರ ತ್ಯಾಗಕ್ಕೆ ತಕ್ಕ ಮಾನ್ಯತೆ ಸಿಗಲಿ

1 ಕಾಮೆಂಟ್‌: