ಗುರುವಾರ, ಡಿಸೆಂಬರ್ 15, 2011

ಕರವೇ ಹೋರಾಟಕ್ಕೆ ಮೆಟ್ರೋನಿಂದ ಉತ್ತರ

ದಿನಾಂಕ ೨.೧೨.೨೦೧೧ ರಂದು ಕರ್ನಾಟಕ ರಕ್ಷಣಾ ವೇದಿಕೆ, ನಮ್ಮ ಮೆಟ್ರೋನಲ್ಲಿ ಕನ್ನಡಿಗರಿಗೆ ಉದ್ಯೋಗದಲ್ಲಿ ಮತ್ತು ಬಾಶಾ ನೀತಿಯಲ್ಲಿ ಆಗಿರುವ ಅನ್ಯಾಯ ನೀಗಿಸಬೇಕು ಎಂದು ಒತ್ತಾಯಿಸಿ ಮನವಿ ಪತ್ರವನ್ನ ನೀಡಿದ್ದರು. ಇದಕ್ಕೆ ಉತ್ತರವಾಗಿ ಮೇಟ್ರೋನಿಂದ ಕರವೇಗೆ ಬಂದಿರುವ ಉತ್ತ್ತರದ ಪ್ರತಿಯನ್ನ ಕರವೇ ವೆಬ್ ಸೈಟ್ (http://karave.blogspot.com/2011/12/krv-horatakke-metrodinda-uttara.html)ನಲ್ಲಿ ಹಾಕಲಾಗಿದೆ.

ಈ ಉತ್ತರದ ಪ್ರಕಾರ ಮೆಟ್ರೋ ನಲ್ಲಿ ಉದ್ಯೋಗಕ್ಕೆ ಕನ್ನಡ ಬಲ್ಲವರನ್ನ ಮಾತ್ರ ಕೆಲಸಕ್ಕೆ ನೇಮಿಸಿಕೊಳ್ಳಬೇಕೆಂದು ಆದೇಶ ಹೊರಡಿಸಿರುವುದಾಗಿಯೂ ಮತ್ತು ಇದರ ಜೊತೆಗೆ  ಬದ್ರತಾ ಸೇವೆ ಮತ್ತು ಸ್ವಚ್ಚತಾ ಕೆಲಸಗಳನ್ನ ಹೊರಗುತ್ತಿಗೆ ನೀಡಲಾಗಿದ್ದು ಅಂತಹಾ ಹೊರಗುತ್ತಿಗೆದಾರ  ಏಜೆನ್ಸಿಗಳು ಕೂಡ ಕನ್ನಡ ಓದಲು ಬರೆಯಲು ಮತ್ತು ಮಾತನಾಡಲು
ಬಲ್ಲವರನ್ನ ಮಾತ್ರ ನೇಮಿಸಿಕೊಳ್ಳಬೇಕೆಂಬ ಶರತ್ತನ್ನ ವಿದಿಸಿ ಕರಾರನ್ನ ಮಾಡಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ. ಇದೊಂದು ಒಳ್ಳೆಯ ಬೆಳವಣಿಗೆಯಾಗಿದ್ದು ನಿಜವಾಗಿಯೂ ನಮ್ಮ ಮೆಟ್ರೋನ ಮತ್ತು ಹೊರಗುತ್ತಿಗೆ ಉದ್ಯೋಗಗಳು ಕನ್ನಡ ಬಲ್ಲವರಿಗೆ ಮಾತ್ರ  ಎಂಬ  ಆದೇಶ ಕಟ್ಟು ನಿಟ್ಟಾಗಿ ಜಾರಿಯಾಗುವಂತೆ ನೊಡಿಕೊಳ್ಳಬೇಕಾಗಿದೆ. ಇದೆಲ್ಲವುದರ ಜೊತೆಗೆ ಮುಕ್ಯವಾಗಿ  ಕರ್ನಾಟಕ ರಾಜ್ಯದಲ್ಲಿ ಕನ್ನಡ ಆಡಳಿತ ಬಾಶೆ ಮತ್ತು ತನ್ನ ಎಲ್ಲಾ ಕಚೇರಿ ವ್ಯವಹಾರಗಳನ್ನ ಕನ್ನಡ ಬಾಶೆಯಲ್ಲೆ ವ್ಯವಹರಿಸುವುದು ನಮ್ಮ ಮೆಟ್ರೋ ನ ಜವಾಬ್ದಾರಿಯೆಂದು ಮತ್ತು ಕರ್ನಾಟಕ ಸರಕಾರದ ನೀತಿ ನಿಯಮಗಳಿಗೆ ತಮ್ಮ ಸಂಸ್ತೆಯು ಶ್ರದ್ದೆಯ ಸಹಮತ ಸೂಚಿಸುತ್ತದೆ ಎಂದೂ ಸಹ ಹೇಳಿರುತ್ತಾರೆ. ಇದೇ ನಿಟ್ಟಿನಲ್ಲಿ ನಮ್ಮ ಮೆಟ್ರೋ ತನ್ನ ಅಂತರ್ಜಾಲದಲ್ಲಿ ಕನ್ನಡಕ್ಕೆ ಆದ್ಯತೆಯನ್ನ ನೀಡಿ ಸಾರ್ವಜನಿಕರಿಗೆ ಕನ್ನಡ  ಮಾಹಿತಿಯನ್ನ ತಿಳಿಸುವಂತೆ
ಸುತ್ತೋಲೆಗಳನ್ನು ಹೊರಡಿಸಲಾಗಿದೆ ಎಂದೂ ಸಹ ತಿಳಿಸಿದ್ದಾರೆ, ಈ ಸುತ್ತೋಲೆ ಜಾರಿರೂಪಕ್ಕೆ ಬಂದರೆ ಮಾತ್ರ ನಿಜಕ್ಕು ಕನ್ನಡಿಗರಿಗೆ ಉಪಯೋಗವಾಗುತ್ತದೆ.

ಇದರ ಜೊತೆಗೆ ಹಿಂದಿ ಬಾಶೆಯ ಬಳಕೆಯ ಬಗ್ಗೆ ನಮ್ಮ ಮೆಟ್ರೋನ ಉತ್ತರ ಮಾತ್ರ ಸಮಂಜಸವಾಗಿಲ್ಲವೆನ್ನಿಸುತ್ತದೆ. ಕೇಂದ್ರ ಸರಕಾರ ಮತ್ತು ರಾಜ್ಯ ಸರಕಾರದ ಸಹಯೋಗದ ಸಂಸ್ತೆಯೆಂದ ಮಾತ್ರಕ್ಕೆ ಹಿಂದಿಯನ್ನ ಬಳಸಿದ್ದಿವಿ  ಎನ್ನೊವುದು ಸರಿಯಲ್ಲದ ಕ್ರಮವಾಗಿದೆ.

ಈ ಆದೇಶಗಳ ಬಗ್ಗೆ ಇಲ್ಲಿಯವರೆಗೂ ಎಲ್ಲಿಯೂ ಮೆಟ್ರೋ ಹೇಳಿರುವುದನ್ನ ನಾನೆಂದೂ ಕಂಡಿಲ್ಲ ಮತ್ತು ಕರವೇ ಹೋರಾಟದ ಪಲವಾಗಿ ನೀಡಿರುವ ಉತ್ತರ ನಿಜಕ್ಕೂ ಕರವೇ ಹೋರಾಟಕ್ಕೆ ಸಿಕ್ಕ ಜಯವಾಗಿದೆ. ಈ ಉತ್ತರದ ಆದಾರದ ಮೇಲೆ  ಉದ್ಯೋಗದ ವಿಶಯದಲ್ಲಿ ಮತ್ತು ತನ್ನ ಆಡಳಿತದ ವಿಶಯದಲ್ಲಿ ಹೊರಡಿಸಿರುವ ಆದೇಶಗಳ ಅನುಶ್ಟಾನ ಆಗುವ ವರೆಗೆ ಮೆಟ್ರೋ ಮೇಲೆ ಒತ್ತಡ ಹಾಕುವ ಕೆಲಸದಲ್ಲಿ ಕರವೇ ಜೊತೆಗೆ ಕೈಜೋಡಿಸಬೇಕಾದ್ದು ನಮ್ಮ ಕರ್ತವ್ಯವೆಂದು ಬಾವಿಸುತ್ತೇನೆ. ಇದೆಲ್ಲವುದರ ಜೊತೆಗೆ ಅನಗತ್ಯ ಹಿಂದಿ ಬಳಕೆಯನ್ನ ಸಹ ಕೈಬಿಡುವಂತೆ ಸಹಾ ಒತ್ತಡ
ಹಾಕಬೇಕಾಗಿದೆ.

ಗುರುವಾರ, ಡಿಸೆಂಬರ್ 8, 2011

ಇದೇನಪ್ಪ !!!! ಇಂಗ್ಲೀಶ್ ಕಲಿತು ಸಾಹಿತ್ಯ ಸಮ್ಮೇಳನಕ್ಕೆ ಹೋಗಬೇಕೆ?


೭೮ನೇ ಕನ್ನಡ ನುಡಿಹಬ್ಬವು ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ಇದೇ ತಿಂಗಳ ೯ನೇ ತಾರೀಕಿನಂದು ಶುರುವಾಗ್ತಿದೆ. ಪ್ರತಿಸರಿಯಂತೆ ಈ ಸರಿಯೂ ಅನೇಕ ಗೋಶ್ಟಿಗಳು, ಪುಸ್ತಕ ಪ್ರದರ್ಶನ ಮತ್ತು ಮಾರಾಟಗಳನ್ನ ಏರ್ಪಡಿಸಿದ್ದಾರೆ ಇದೆಲ್ಲವುದರ ಜೊತೆಗೆ ಇಲ್ಲಿ  ನಾಡಿನ ಸಾಹಿತ್ಯ ರಂಗದ  ದಿಗ್ಗಜರು ಬಂದು ಸೇರುತ್ತಾರೆ.

ನುಡಿಹಬ್ಬದ ಕುಶಿಯಲ್ಲಿ  ಬಾಗಿಯಾಗೋಕ್ಕೆ ನಾನು ಸಹ ಇಂದು ಗಂಗಾವತಿಗೆ ಹೋಗುವವನಿದ್ದೇನೆ. ಇದಕ್ಕೆಂದು ನಮ್ಮ ಕ.ರಾ.ರ.ಸಾ.ಸಂ ಯ ಬಸ್ಸಿನಲ್ಲಿ ಒಂದು ಟಿಕೆಟ್ ಅನ್ನು ಕಾಯ್ದಿರಿಸಿದ್ದೇನೆ.  ಆದರೆ ಈ ಟಿಕೆಟ್ ನೋಡಿದ ತಕ್ಯಣ ನನ್ನ ಮನಸ್ಸಿನಲ್ಲಿ ಬಂದಿದ್ದು " ಇದೇನಪ್ಪ !!!! ಇಂಗ್ಲೀಶ್ ಕಲಿತು ಸಾಹಿತ್ಯ ಸಮ್ಮೇಳನಕ್ಕೆ ಹೋಗಬೇಕೆ?" ಎಂಬುದು, ಹೀಗೆ ನನ್ನ ಮನಸ್ಸಿನಲ್ಲಿ ಬರೋಕ್ಕೆ ಕಾರಣವಿದೆ. ಅದೇನಂದ್ರೆ ತಂತ್ರಜ್ನಾನ ಇಶ್ಟು ಮುಂದುವರೆದರೂ ಸಹ ಇಂದಿಗೂ ನಮ್ಮ  ಕ.ರ.ಸಾ.ಸಂ ಯವರು ಕನ್ನಡದಲ್ಲಿ ಟಿಕೆಟ್ ಮುದ್ರಿಸಿಕೊಡದಿರೋದು.  ಕ.ರಾ.ರ.ಸಾ.ಸಂ ಯ ಸೀಟು ಕಾಯ್ದಿರಿಸುವ ಟಿಕೆಟ್ ನಲ್ಲಿ ಕಾಯ್ದಿರಿಸುವಿಕೆಗೆ ಸಂಬಂದಿಸಿದ ಎಲ್ಲಾ ಮಾಹಿತಿಗಳು ಇಂಗ್ಲೀಶ್ ನಲ್ಲಿ ಇವೆ. ಇಂಗ್ಲೀಶ್ ಸರಿಯಾಗಿ ಬಲ್ಲವರು ತಮಗೆ ನೀಡಿದ ಟಿಕೆಟ್ ಸರಿಯಿದೆಯೇ ಇಲ್ಲವೇ ಎನ್ನೊದನ್ನ ತಿಳಿಯೋಕ್ಕೆ ಸಾದ್ಯ, ಇಂಗ್ಲೀಶ್ ಗೊತ್ತಿಲ್ಲದವರ ಕತೆ ದೇವರೇ ಬಲ್ಲ. ಗಂಗಾವತಿಯ ನುಡಿಹಬ್ಬಕ್ಕೆ ಬರಬೇಕಾದವರು ಅಕಸ್ಮಾತ್ ತಪ್ಪಾಗಿ ಬೇರೆಯಾವುದೋ ಟಿಕೆಟ್ ಪಡೆದು, ಸರಿಯಿದೆಯೇ ಎಂದು ನೋಡೊಕ್ಕೆ ತಿಳಿಯದೇ ಇನ್ನೆಲ್ಲೋ ಹೋಗುವ ಪರಿಸ್ತಿತಿ ಬಂದ್ರೆ ಅದಕ್ಕೆ ಆಶ್ಚರ್ಯಪಡಬೇಕಾದ್ದಿಲ್ಲ.


ಸರಕಾರ ಪ್ರತಿವರ್ಶ ಕೋಟ್ಯಂತರ ರೂಪಾಯಿ ಕರ್ಚು ಮಾಡಿ ಸಾಹಿತ್ಯ ಸಮ್ಮೇಳನದ ಜೊತೆಗೆ ಹಲವಾರು ತರದ ಕನ್ನಡ ಹಬ್ಬಗಳನ್ನ ಆಚರಿಸುತ್ತದೆ. ಆದರೆ ಅದೇ ಸರಕಾರದ  ಕ.ರಾ.ರ.ಸಾ.ಸಂ ಸೇರಿದಂತೆ ಹಲವಾರು ಸಂಸ್ತೆಗಳು ಕನ್ನಡದಲ್ಲಿ ಆಡಳಿತವನ್ನ ನಡೆಸದೇ ತಮ್ಮ ಸೇವೆಗಳನ್ನ ಕನ್ನಡಿಗರಿಂದ ದೂರಕ್ಕೆ ಕೊಂಡೊಯ್ಯುತ್ತಿರುವುದು ವಿಪರ್ಯಾಸವೇ ಸರಿ!  ಕ.ರಾ.ರ.ಸಾ.ಸಂ ಯವರಿಗೆ ಕನ್ನಡದ ಬಗ್ಗೆ ಕನ್ನಡಿಗರ ಬಗ್ಗೆ ಕರ್ನಾಟಕದ ಬಗ್ಗೆ ಕಳಕಳಿಯಿದ್ದಿದ್ದೇ ಆಗಿದ್ದಲ್ಲಿ ತಮ್ಮ ಗ್ರಾಹಕ ಸೇವೆಯಲ್ಲಿ ಬಳಕೆಯಾಗಿರುವ ತಂತ್ರಜ್ನಾನದಲ್ಲಿ ಕನ್ನಡವನ್ನ ಬಳಸಿ ಕನ್ನಡಿಗರಿಗೆ ತಮ್ಮ ಸೇವೆಯನ್ನ ಪರಿಣಾಮಕಾರಿಯಾಗಿ ತಲುಪಿಸಲು ಪ್ರಯತ್ನ ನಡೆಸುತ್ತಿದ್ದರು. ಆದರೆ ಕ.ರಾ.ರ.ಸಾ.ಸಂ ವರ್ಶಕ್ಕೊಮ್ಮೆ ಒಬ್ಬ ಕನ್ನಡದ ಸಾದಕರಿಗೆ ನ್ರುಪತುಂಗ ಪ್ರಶಸ್ತಿ ನೀಡುವುದೇ ಕನ್ನಡ ಕೆಲಸವೆಂದು ತಿಳಿದಿದಿಯೇನೋ(?). ವರ್ಶಕ್ಕೊಮ್ಮೆ ಪ್ರಶಸ್ತಿ ನೀಡಿ ಪ್ರತಿದಿನ ಕನ್ನಡಿಗರಿಂದ ತನ್ನ ಸೇವೆಗಳನ್ನ ದೂರಕ್ಕೆ ಕೊಂಡೊಯ್ಯುತ್ತಿರೋದು ನೋಡಿದ್ರೆ ಆ ಪ್ರಶಸ್ತಿ ನೀಡೋದಕ್ಕೆ ಯಾವುದೇ ಅರ್ತ ಇರೋಲ್ಲ ಅನ್ನಿಸುತ್ತೆ.

ತಂತ್ರಜ್ನಾನ ಬಳಕೆಯಿಂದ ನಿಜಕ್ಕು ಕನ್ನಡದಲ್ಲಿ ಸೇವೆಯನ್ನ ಸುಲಬವಾಗಿ ನೀಡಬಹುದು ಇದರಿಂದ ಜನರಿಗೆ ತಮ್ಮ ಸೇವೆಯನ್ನು ಪರಿಣಾಮಕಾರಿಯಾಗಿ ತಲುಪಿಸಲು ಸಾದ್ಯ ಅನ್ನೊದನ್ನ  ಕ.ರಾ.ರ.ಸಾ.ಸಂ ಯಂತಹ ಸರಕಾರಿ ಸಂಸ್ತೆಗಳು ತಿಳಿದುಕೊಳ್ಳೋದು ಯಾವಾಗ?

ಕೊನೆಯದಾಗಿ: “ಪರಿಣಾಮಕಾರಿ ಆಡಳಿತಕ್ಕಾಗಿ ಕನ್ನಡದಲ್ಲಿ ತಂತ್ರಜ್ಞಾನ” ಎಂಬ ವಿಶಯವಾಗಿ ನನ್ನ ಸ್ನೇಹಿತ ಚೇತನ್ ಇದೇ ನುಡಿಹಬ್ಬದಲ್ಲಿ “ಆಧುನಿಕ ಜಗತ್ತು ಮತ್ತು ಕನ್ನಡ”( ೧೦ನೇ ಡಿಸೆಂಬರ್ ಸಂಜೆ ೪.೩೦ ಕ್ಕೆ)  ಎಂಬ ವಿಚಾರ ಸಂಕಿರಣದಲ್ಲಿ ಮಾತನಾಡಲಿದ್ದಾರೆ. ಇದರಲ್ಲಿ  ಆಡಳಿತವನ್ನು ಪರಿಣಾಮಕಾರಿಯಾಗಿ ಜನರಿಗೆ ಮುಟ್ಟಿಸುವಲ್ಲಿ ತಂತ್ರಜ್ಞಾನ ಪಾತ್ರವೇನು? ಹಾಗೂ ಆಡಳಿತವನ್ನು ಪರಿಣಾಮಕಾರಿಯಾಗಿ ಜನರಿಗೆ ಮುಟ್ಟಿಸುವಲ್ಲಿ ಭಾಷೆಯ ಪ್ರಾಮುಖ್ಯತೆ ಹಾಗೂ ಇದರಿಂದ ನಮ್ಮ ಸಮಾಜದಲ್ಲಿ ತರಬಹುದಾದ ಬದಲಾವಣೆಗಳ ಬಗ್ಗೆ ಮಾತನಾಡಲಿದ್ದಾರೆ. ಇದೇ ವಿಚಾರ ಸಂಕಿರಣದಲ್ಲಿ ಗೆಳೆಯರಾದ ಓಂಶಿವಪ್ರಕಾಶ್ ಮಾಹಿತಿ ತಂತ್ರಜ್ಞಾನ ಮತ್ತು ಕನ್ನಡ ಇಂದು - ಮುಂದು ಅನ್ನೋ ವಿಷಯದ ಕುರಿತು ಮಾತನಾಡಲಿದ್ದಾರೆ.