ಬೆಂಗಳೂರು ಮೆಟ್ರೊ ಲೇಬಲ್‌ನೊಂದಿಗೆ ಪೋಸ್ಟ್‌ಗಳನ್ನು ತೋರಿಸಲಾಗುತ್ತದೆ. ಎಲ್ಲಾ ಪೋಸ್ಟ್‌ಗಳನ್ನು ತೋರಿಸಿ
ಬೆಂಗಳೂರು ಮೆಟ್ರೊ ಲೇಬಲ್‌ನೊಂದಿಗೆ ಪೋಸ್ಟ್‌ಗಳನ್ನು ತೋರಿಸಲಾಗುತ್ತದೆ. ಎಲ್ಲಾ ಪೋಸ್ಟ್‌ಗಳನ್ನು ತೋರಿಸಿ

ಗುರುವಾರ, ಡಿಸೆಂಬರ್ 15, 2011

ಕರವೇ ಹೋರಾಟಕ್ಕೆ ಮೆಟ್ರೋನಿಂದ ಉತ್ತರ

ದಿನಾಂಕ ೨.೧೨.೨೦೧೧ ರಂದು ಕರ್ನಾಟಕ ರಕ್ಷಣಾ ವೇದಿಕೆ, ನಮ್ಮ ಮೆಟ್ರೋನಲ್ಲಿ ಕನ್ನಡಿಗರಿಗೆ ಉದ್ಯೋಗದಲ್ಲಿ ಮತ್ತು ಬಾಶಾ ನೀತಿಯಲ್ಲಿ ಆಗಿರುವ ಅನ್ಯಾಯ ನೀಗಿಸಬೇಕು ಎಂದು ಒತ್ತಾಯಿಸಿ ಮನವಿ ಪತ್ರವನ್ನ ನೀಡಿದ್ದರು. ಇದಕ್ಕೆ ಉತ್ತರವಾಗಿ ಮೇಟ್ರೋನಿಂದ ಕರವೇಗೆ ಬಂದಿರುವ ಉತ್ತ್ತರದ ಪ್ರತಿಯನ್ನ ಕರವೇ ವೆಬ್ ಸೈಟ್ (http://karave.blogspot.com/2011/12/krv-horatakke-metrodinda-uttara.html)ನಲ್ಲಿ ಹಾಕಲಾಗಿದೆ.

ಈ ಉತ್ತರದ ಪ್ರಕಾರ ಮೆಟ್ರೋ ನಲ್ಲಿ ಉದ್ಯೋಗಕ್ಕೆ ಕನ್ನಡ ಬಲ್ಲವರನ್ನ ಮಾತ್ರ ಕೆಲಸಕ್ಕೆ ನೇಮಿಸಿಕೊಳ್ಳಬೇಕೆಂದು ಆದೇಶ ಹೊರಡಿಸಿರುವುದಾಗಿಯೂ ಮತ್ತು ಇದರ ಜೊತೆಗೆ  ಬದ್ರತಾ ಸೇವೆ ಮತ್ತು ಸ್ವಚ್ಚತಾ ಕೆಲಸಗಳನ್ನ ಹೊರಗುತ್ತಿಗೆ ನೀಡಲಾಗಿದ್ದು ಅಂತಹಾ ಹೊರಗುತ್ತಿಗೆದಾರ  ಏಜೆನ್ಸಿಗಳು ಕೂಡ ಕನ್ನಡ ಓದಲು ಬರೆಯಲು ಮತ್ತು ಮಾತನಾಡಲು
ಬಲ್ಲವರನ್ನ ಮಾತ್ರ ನೇಮಿಸಿಕೊಳ್ಳಬೇಕೆಂಬ ಶರತ್ತನ್ನ ವಿದಿಸಿ ಕರಾರನ್ನ ಮಾಡಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ. ಇದೊಂದು ಒಳ್ಳೆಯ ಬೆಳವಣಿಗೆಯಾಗಿದ್ದು ನಿಜವಾಗಿಯೂ ನಮ್ಮ ಮೆಟ್ರೋನ ಮತ್ತು ಹೊರಗುತ್ತಿಗೆ ಉದ್ಯೋಗಗಳು ಕನ್ನಡ ಬಲ್ಲವರಿಗೆ ಮಾತ್ರ  ಎಂಬ  ಆದೇಶ ಕಟ್ಟು ನಿಟ್ಟಾಗಿ ಜಾರಿಯಾಗುವಂತೆ ನೊಡಿಕೊಳ್ಳಬೇಕಾಗಿದೆ. ಇದೆಲ್ಲವುದರ ಜೊತೆಗೆ ಮುಕ್ಯವಾಗಿ  ಕರ್ನಾಟಕ ರಾಜ್ಯದಲ್ಲಿ ಕನ್ನಡ ಆಡಳಿತ ಬಾಶೆ ಮತ್ತು ತನ್ನ ಎಲ್ಲಾ ಕಚೇರಿ ವ್ಯವಹಾರಗಳನ್ನ ಕನ್ನಡ ಬಾಶೆಯಲ್ಲೆ ವ್ಯವಹರಿಸುವುದು ನಮ್ಮ ಮೆಟ್ರೋ ನ ಜವಾಬ್ದಾರಿಯೆಂದು ಮತ್ತು ಕರ್ನಾಟಕ ಸರಕಾರದ ನೀತಿ ನಿಯಮಗಳಿಗೆ ತಮ್ಮ ಸಂಸ್ತೆಯು ಶ್ರದ್ದೆಯ ಸಹಮತ ಸೂಚಿಸುತ್ತದೆ ಎಂದೂ ಸಹ ಹೇಳಿರುತ್ತಾರೆ. ಇದೇ ನಿಟ್ಟಿನಲ್ಲಿ ನಮ್ಮ ಮೆಟ್ರೋ ತನ್ನ ಅಂತರ್ಜಾಲದಲ್ಲಿ ಕನ್ನಡಕ್ಕೆ ಆದ್ಯತೆಯನ್ನ ನೀಡಿ ಸಾರ್ವಜನಿಕರಿಗೆ ಕನ್ನಡ  ಮಾಹಿತಿಯನ್ನ ತಿಳಿಸುವಂತೆ
ಸುತ್ತೋಲೆಗಳನ್ನು ಹೊರಡಿಸಲಾಗಿದೆ ಎಂದೂ ಸಹ ತಿಳಿಸಿದ್ದಾರೆ, ಈ ಸುತ್ತೋಲೆ ಜಾರಿರೂಪಕ್ಕೆ ಬಂದರೆ ಮಾತ್ರ ನಿಜಕ್ಕು ಕನ್ನಡಿಗರಿಗೆ ಉಪಯೋಗವಾಗುತ್ತದೆ.

ಇದರ ಜೊತೆಗೆ ಹಿಂದಿ ಬಾಶೆಯ ಬಳಕೆಯ ಬಗ್ಗೆ ನಮ್ಮ ಮೆಟ್ರೋನ ಉತ್ತರ ಮಾತ್ರ ಸಮಂಜಸವಾಗಿಲ್ಲವೆನ್ನಿಸುತ್ತದೆ. ಕೇಂದ್ರ ಸರಕಾರ ಮತ್ತು ರಾಜ್ಯ ಸರಕಾರದ ಸಹಯೋಗದ ಸಂಸ್ತೆಯೆಂದ ಮಾತ್ರಕ್ಕೆ ಹಿಂದಿಯನ್ನ ಬಳಸಿದ್ದಿವಿ  ಎನ್ನೊವುದು ಸರಿಯಲ್ಲದ ಕ್ರಮವಾಗಿದೆ.

ಈ ಆದೇಶಗಳ ಬಗ್ಗೆ ಇಲ್ಲಿಯವರೆಗೂ ಎಲ್ಲಿಯೂ ಮೆಟ್ರೋ ಹೇಳಿರುವುದನ್ನ ನಾನೆಂದೂ ಕಂಡಿಲ್ಲ ಮತ್ತು ಕರವೇ ಹೋರಾಟದ ಪಲವಾಗಿ ನೀಡಿರುವ ಉತ್ತರ ನಿಜಕ್ಕೂ ಕರವೇ ಹೋರಾಟಕ್ಕೆ ಸಿಕ್ಕ ಜಯವಾಗಿದೆ. ಈ ಉತ್ತರದ ಆದಾರದ ಮೇಲೆ  ಉದ್ಯೋಗದ ವಿಶಯದಲ್ಲಿ ಮತ್ತು ತನ್ನ ಆಡಳಿತದ ವಿಶಯದಲ್ಲಿ ಹೊರಡಿಸಿರುವ ಆದೇಶಗಳ ಅನುಶ್ಟಾನ ಆಗುವ ವರೆಗೆ ಮೆಟ್ರೋ ಮೇಲೆ ಒತ್ತಡ ಹಾಕುವ ಕೆಲಸದಲ್ಲಿ ಕರವೇ ಜೊತೆಗೆ ಕೈಜೋಡಿಸಬೇಕಾದ್ದು ನಮ್ಮ ಕರ್ತವ್ಯವೆಂದು ಬಾವಿಸುತ್ತೇನೆ. ಇದೆಲ್ಲವುದರ ಜೊತೆಗೆ ಅನಗತ್ಯ ಹಿಂದಿ ಬಳಕೆಯನ್ನ ಸಹ ಕೈಬಿಡುವಂತೆ ಸಹಾ ಒತ್ತಡ
ಹಾಕಬೇಕಾಗಿದೆ.

ಶುಕ್ರವಾರ, ನವೆಂಬರ್ 4, 2011

ನಮ್ಮ ತ್ಯಾಗದಿಂದಲೇ ಅಲ್ಲವೇ ನಮ್ಮ ಮೆಟ್ರೋ ಓಡುತ್ತಿರುವುದು?

ನಮ್ಮ ಮೆಟ್ರೋನ ಬಗ್ಗೆ ನವಂಬರ್ 3 ರಂದು ಡೆಕನ್ ಹೆರಾರ್ಡ್ ಪತ್ರಿಕೆಯಲ್ಲಿ ಒಂದು ವರದಿ ಪ್ರಕಟವಾಗಿದೆ, ಈ ವರದಿಯ ಪ್ರಕಾರ, ನಮ್ಮ ಮೆಟ್ರೊ, ಬೆಂಗಳೂರು ನಗರ ಪಾಲಿಕೆಯ ಹಲವಾರು ಜಾಗಗಳನ್ನ ಬಿಟ್ಟಿಯಾಗಿ ವಶಪಡಿಸಿಕೊಂಡು ಅಲ್ಲಿ ಕಾಮಗಾರಿಯನ್ನ ನಡೆಸುತ್ತಿದೆ, ಪಾಲಿಕೆಯ ಸುಮಾರು 65 ರಿಂದ 70 ಸಾವಿರ ಅಡಿಗಳಶ್ಟು ಜಾಗ ಮತ್ತು ಅಲ್ಲಿ ಇರುವ ಕಟ್ಟಡ ನಮ್ಮ ಮೆಟ್ರೋ ಪಾಲಾಗಿದೆ. ಈ ಆಸ್ತಿ ನೂರಾರು ಕೋಟಿ ಬೆಲೆಬಾಳುತ್ತದೆ.

ಇವಿಶ್ಟೇ ಅಲ್ಲದೇ ನಮ್ಮ ಮೆಟ್ರೊಗೆಂದು ನಗರದ ಹಲವಾರು ಕಡೆಗಳಲ್ಲಿ ನಮ್ಮ ನಾಡಿನ ಜನರು ಮಾರುಕಟ್ಟೆಯ ದರಕ್ಕಿಂತ ಕಡಿಮೆ ಹಣಕ್ಕೆ ತಮ್ಮ ಜಾಗವನ್ನ ಕೊಟ್ಟಿದ್ದಾರೆ, ಹಲವಾರು ಅಂಗಡಿ ಮುಂಗಟ್ಟುಗಳನ್ನ ನಮ್ಮ ಮೆಟ್ರೋಗೆಂದು ಮುಚ್ಚಿಸಲಾಗಿದೆ. ಬೆಂಗಳೂರಿನಾದ್ಯಂತ ನಡೆಯುತ್ತಿರುವ ಮೇಟ್ರೋ ಕಾಮಗಾರಿಯಿಂದ ಉಂಟಾಗಿರುವ ಟ್ರಾಪಿಕ್ ವೈಪರಿತ್ಯವನ್ನು ದಿನ ನಿತ್ಯ ನಮ್ಮ ಜನ ಅನುಬವಿಸುತ್ತಿದ್ದಾರೆ.. ಇಂತಹ ನಮ್ಮ ನಾಡಿನ ಜನರ ತ್ಯಾಗದಿಂದಲೇ ನಮ್ಮ ಮೆಟ್ರೊ ಬಿಡುಗಡೆಯಾಗಿ ಓಡಾಡಲು ಸಾದ್ಯವಾಗಿರುವುದು ಅಲ್ಲವೇ? ಆದರೆ ಇವ್ಯಾವು ಲೆಕ್ಕಕ್ಕೆ ಇಲ್ಲವೆಂಬಂತೆ ನಮ್ಮ ಮೆಟ್ರೊ ಬೆಂಗಳೂರಿಗರನ್ನ ನಡೆಸಿಕೊಳ್ಳುತ್ತಿರುವುದು ಮಾತ್ರ ದುರಂತವೇ ಸರಿ..

ನಮ್ಮ ನಾಡಿನ ಜನರ ತ್ಯಾಗವಿದ್ದರೂ ಸಹ ನಮ್ಮ ನಾಡಿನ ಬಾಶೆಗೆ ಮನ್ನಣೆ ಸಿಗಬೇಕು, ನಮ್ಮ ನಾಡಿನ ಜನರಿಗೆ ಉದ್ಯೋಗ ಸಿಗಬೇಕು ಎನ್ನುವುದನ್ನ ಬೇಡಿಕೊಳ್ಳುವ ಪರಿಸ್ತಿತಿಯನ್ನ ನಮ್ಮ ಮೆಟ್ರೋ ನ ಅದಿಕಾರಿಗಳು ನಿರ್ಮಿಸಿದ್ದಾರೆ. ನಮ್ಮ ನಾಡಿನ ಜನರ ಬಾಶಾ ಮತ್ತು ಉದ್ಯೋಗದ ಕಳಕಳಿಗೆ, ಮೆಟ್ರೊ ಅದಿಕಾರಿಗಳು ಉದ್ದಟ ತನ ತೋರುತ್ತಿದ್ದಾರೆ ಮತ್ತು ಇದಕ್ಕೆ ಪೂರಕವಾಗಿ ಪರರಾಜ್ಯದಿಂದ ಬಂದು ನಮ್ಮ ಮೆಟ್ರೊನಲ್ಲಿ ಕೆಲಸ ಮಾಡುತ್ತಿರುವರುಗಳು ನಮ್ಮ ನಾಡು ನುಡಿ ವಿರುದ್ದವಾಗಿ ಮಾತನಾಡಿ ನಮ್ಮ ಸ್ವಾಬಿಮಾನವನ್ನ ಕೆರಳಿಸುವಂತೆ ಮಾಡುತ್ತಿದ್ದಾರೆ. ಕನ್ನಡ ವಿರೋದಿ ಮೆಟ್ರೊ ಅದಿಕಾರಿಗಳು ಮತ್ತು ಪರರಾಜ್ಯದಿಂದ ಬಂದು ಕನ್ನಡ ವಿರೋದಿತನ ತೋರುತ್ತಿರುವ ಮೆಟ್ರೊ ಕೆಲಸಗಾರರಿಗೆ ದಿಕ್ಕಾರವಿರಲಿ... ನಮ್ಮ ನಾಡಿನ ಜನರ ತ್ಯಾಗಕ್ಕೆ ತಕ್ಕ ಮಾನ್ಯತೆ ಸಿಗಲಿ

ಭಾನುವಾರ, ಅಕ್ಟೋಬರ್ 16, 2011

ಮೆಟ್ರೋಗೆ ರಕ್ಷಣೆ ನೀಡುವ CISF ನವರಿಗೆ ಕನ್ನಡದ ಜ್ನಾನ ಅತ್ಯಂತ ಅವಶ್ಯಕವಾದುದು.

ಬೆಂಗಳೂರು ಮೆಟ್ರೋ ಕೆಲವೇ ದಿನಗಳಲ್ಲಿ ಪ್ರಾರಂಬವಾಗುತ್ತಿದೆ. CISF ಮೆಟ್ರೋ ಗೆ ರಕ್ಷಣೆ ನೀಡತ್ತಾರೆಂದು ಹೇಳಲಾಗುತ್ತಿದೆ. CISF ನವರು ರಕ್ಷಣೆ ನೀಡುತ್ತಾರೆಂಬುದು ನಿಜಕ್ಕು ಸಂತೋಶದ ವಿಶಯ CISF ನವರಿಗೆ ಉತ್ತಮ ರೀತಿಯ ತರಬೇತಿ ಕೊಡಲಾಗಿರುತ್ತದೆ ಮತ್ತು ಇದು ದುಶ್ಟ್ರ ಕ್ರುತ್ಯಗಳ ತಡೆಗೆ ತುಂಬಾನೆ ಅನುಕೂಲಕಾರಿಯಾಗಿರುತ್ತೆ.


ಆದರೆ CISF ನವರನ್ನ ಬೆಂಗಳೂರಿನ ವಿಮಾನ ನಿಲ್ದಾಣಗಳಲ್ಲಿ ನೋಡಿದ್ದೇವೆ ಅವರುಗಳಿಗೆ ಕನ್ನಡದ ಜ್ನಾನವೇ ಇರುವುದಿಲ್ಲ, ಅನೇಕರು ಹಲವಾರು ಬಾರಿ ವಿಮಾನ ನಿಲ್ದಾಣದಲ್ಲಿ ಇದರಿಂದ ತೊಂದರೆಗೊಳಗಿರುವುದೂ ಉಂಟು. ತುರ್ತು ಸಮಯದಲ್ಲಿ ಪರಿಸ್ತಿತಿಯನ್ನ ನಿಬಾಯಿಸಲು ಇತರೆ ಕಟಿಣ ತರಬೇತಿಗಳಂತೆ ಕನ್ನಡ ಬಾಶೆಯ ಜ್ನಾನವೂ ಅತ್ಯಂತ ಅವಶ್ಯಕವಲ್ಲವೇ?

ಬೆಂಗಳೂರಿನ ವಿಮಾನ ನಿಲ್ದಾಣವನ್ನ ಬಳಸುವವರ ಸಂಕ್ಯೆಗಿಂತ ಮೆಟ್ರೋ ಬಳಸುವ ಜನ ಸಾಮಾನ್ಯರ ಸಂಕ್ಯೆ ಹೆಚ್ಚಾಗಿಯೇ ಇರುತ್ತದೆ. ಮೆಟ್ರೋ ನಿಲ್ದಾಣದಲ್ಲಿ ಇರುವ CISF ನವರು ದುಶ್ಟ ಕ್ರುತ್ಯಗಳ ತಡೆಯುವುದರ ಜೊತೆಗೆ ಪ್ರಯಾಣಿಕರ ಸ್ನೇಹಿಯಾಗಿ ಅನೇಕ ಸಮಯಗಳಲ್ಲಿ ಪ್ರಯಾಣಿಕರಿಗೆ ಸಹಾಯ ಮಾಡಲು ಇವರಿಗೆ ಕನ್ನಡ ಬಾಶೆಯ ಜ್ನಾನ ಇರಲೇಬೇಕು. ಇದರಿಂದ ಮೆಟ್ರೋಗೆ ರಕ್ಷಣೆ ನೀಡುವ CISF ನವರಿಗೆ ಕನ್ನಡ ಬಾಶೆಯ ಕಲಿಕೆ ಅತ್ಯಂತ ಅವಶ್ಯಕವಾದುದು ಕೂಡ.

ಬೆಂಗಳೂರು ಮೆಟ್ರೋ ನವರು CISF ನವರನ್ನ ರಕ್ಷಣೆಗೆ ಕರೆಸಿಕೊಳ್ಳುವುದರ ಜೊತೆಗೆ ಎಲ್ಲಾ CISF ಸಿಬ್ಬಂದಿಗಳಿಗೆ ಕನ್ನಡದ ಜ್ನಾನಕ್ಕಾಗಿ ತರಬೇತಿ ನಡೆಸಿ ಆ ನಂತರ ಕೆಲಸದಲ್ಲಿ ತೊಡಗಿಸಿ ಕೊಳ್ಳುವಂತೆ ಮಾಡಬೇಕು, ಇದು ಬೆಂಗಳೂರು ಮೆಟ್ರೋ ನಿಗಮದ ಕರ್ತವ್ಯ ಕೂಡ