ಬುಧವಾರ, ಜೂನ್ 29, 2011

ಟ್ರಾಪಿಕ್ ಸಮಸ್ಯೆ ಯ ಜಾಗ್ರುತಿ ಕನ್ನಡದಲ್ಲಿರಲಿ

ಬೆಂಗಳೂರಿನ ಟ್ರಾಪಿಕ್ ನಿಯಂತ್ರಿಸುವಲ್ಲಿ ದೇಶದ ಹಲವಾರು ನಗರಗಳ ಪೋಲೀಸರಿಗೆ ಹೋಲಿಸಿದರೆ ನಮ್ಮ ಪೋಲೀಸರು ಬಹಳ ಮುಂದಿದ್ದಾರೆ. ತಂತ್ರಜ್ನಾನವನ್ನ ಬಳಸೋದರ ಮೂಲಕ ಟ್ರಾಪಿಕ್ ನಿಯಂತ್ರಣದಲ್ಲಿ ದೇಶಕ್ಕೆ ಮಾದರಿಯಾಗಿದ್ದಾರೆ ಎನ್ನುವುದು ಪ್ರತಿಯೊಬ್ಬ ಕನ್ನಡಿಗರು ಹೆಮ್ಮೆ ಪಡುವಂತಹದ್ದು.

ಆದ್ರೆ, ಬೆಂಗಳೂರಿನ ಟ್ರಾಪಿಕ್ ಸಮಸ್ಯ್ತೆಯನ್ನು ನಿಯಂತ್ರಣ ಮಾಡುವಲ್ಲಿ ಸಾರ್ವಜನಿಕರು ಪೋಲೀಸರಿಗೆ ಸರಿಯಾಗಿ ಸಹಕರಿಸಿಲ್ಲ ಎಂದು ಬೆಂಗಳೂರಿನ ಪೋಲೀಸ್ ಕಮಿಶನರ್ ಆದ ಜ್ಯೋತಿ ಪ್ರಕಾಶ್ ಮಿರ್ಜಿಯವರು ಇಂದು ನಗರದ ಒಂದು ಕಾರ್ಯಕ್ರಮದಲ್ಲಿ ಹೇಳಿದ್ದಾರೆ.

ಟ್ರಾಪಿಕ್ ಸಮಸ್ಯೆಯನ್ನು ನಿಯಂತ್ರಿಸುವಲ್ಲಿ ಪೋಲೀಸಿನವರಶ್ಟೇ ಸಾರ್ವಜನಿಕರ ಪಾತ್ರವೂ ಇದೆ. ಟ್ರಾಪಿಕ್ ಸಮಸ್ಯೆ ಬಗ್ಗೆ ಸಾರ್ವಜನಿಕರಲ್ಲಿ ಜಾಗ್ರುತಿ ಅತ್ಯಗತ್ಯ. ಈ ಜಾಗ್ರುತಿ ಕೆಲಸವನ್ನು ಪೋಲೀಸಿನವರ ಮಾಡುತ್ತಿಲ್ಲವೆಂದೇನಿಲ್ಲ. ಸಾರ್ವಜನಿಕರಲ್ಲಿ ಟ್ರಾಪಿಕ್ ಸಮಸ್ಯೆ ಬಗ್ಗೆ ಜಾಗ್ರುತಿ ಮೂಡಿಸೋ ಕೆಲ್ಸನೂ ಸಹ ಪೋಲೀಸಿನವರು ಮಾಡುತ್ತಿದ್ದಾರೆ. ಆದರೆ ಇದು ಪರಿಣಾಮಕಾರಿಯಾಗಿಲ್ಲ ಅನ್ನೊದು ನನ್ನ ಅನಿಸಿಕೆ.

ಟ್ರಾಪಿಕ್ ಸಮಸ್ಯೆಯ ಬಗ್ಗೆ ಜಾಗ್ರುತಿ ಕೆಲ್ಸದಲ್ಲಿ ಬಾಶೆ ಅತ್ಯಂತ ಮುಕ್ಯ. ಜನರಿಗೆ ಅರ್ತ ಆಗೋ ಬಾಶೆಲಿ ಈ ಕೆಲ್ಸ ನಡೆದ್ರೆ ಪರಿಣಾಮಕಾರಿಯಾಗಿರುತ್ತೆ. ಬೆಂಗಳೂರಿನ ಬಹುಸಂಕ್ಯಾತ ಜನರ ಬಾಶೆ ಕನ್ನಡದಲ್ಲಿ ಜಾಗ್ರುತಿ ಕಾರ್ಯಕ್ರಮ ನಡೆದ್ರೆ ಜಾಗ್ರುತಿಯ ಸಂದೇಶ ಜನರಿಗೆ ತಲುಪುತ್ತೆ. ವಿಶಾದದ ಸಂಗತಿಯೆಂದರೆ, ಪೋಲೀಸಿನವರು ಸಾರ್ವಜನಿಕರನ್ನ ಜಾಗ್ರುತಿ ಮಾಡೋ ಕಾರ್ಯದಲ್ಲಿ ವಲಸಿಗರನ್ನ ಮಾತ್ರ ಗಣನೆಗೆ ತೆಗೆದುಕೊಂಡು ಬಹುಸಂಕ್ಯಾತ ಕನ್ನಡಿಗರನ್ನ ಮರೆತಿರುವುದು ದುರದ್ರುಶ್ಟವೇ.

ಟ್ರಾಪಿಕ್ ಸಮಸ್ಯೆಯ ಬಗ್ಗೆ ನಗರದಲ್ಲಿ ಹಲವಾರು ಹೋರ್ಡಿಂಗ್ ಗಳನ್ನ ನೋಡಬಹುದು ಈ ಹೋರ್ಡಿಂಗ್ ಗಳನ್ನ ಪೋಲೀಸ್ ಇಲಾಕೆ ಜನರಿಗೆ ಜಾಗ್ರುತಿ ಮಾಡೊಕ್ಕೆ ಅಂತನೇ ಹಾಕಿರೋದು . ಆದ್ರೆ ಹೆಚ್ಚಿನ ಹೋರ್ಡಿಂಗ್ ಗಳಲ್ಲಿ ಬಹುಸಂಕ್ಯಾತ ಬೆಂಗಳೂರಿಗರಿಗೆ ಅರ್ತವಾಗದ ಇಂಗ್ಲೀಶ್ ಬಾಶೆಯಲ್ಲಿ ಮಾತ್ರ ಇದೆ. ಇನ್ನು ಇತ್ತೀಚೆಗೆ ಹಲವಾರು ಕಡೆ ಅಳವಡಿಸಲಾಗಿರೋ ಎಲೆಟ್ರಾನಿಕ್ ಡಿಸ್ಪ್ಲೆ ಕಡೆ ನೋಡಿದ್ರೆ, ಅಲ್ಲೂ ಸಹ ಇದೆ ರೀತಿ ಜನರಿಗೆ ಗೊತ್ತಿಲ್ಲದ ಬಾಶೆಯಲ್ಲಿ ಜಾಗ್ರುತಿ ಮಾಡೊ ಪ್ರಯತ್ನ ಮಾಡ್ತಿರೋದು ಎದ್ದು ಕಾಣಿಸುತ್ತಿದೆ.

ಇನ್ನು ಟ್ರಾಫಿಕ್ ಪೋಲೀಸಿನವರು ಕಳೆದ ಕೆಲವು ತಿಂಗಳ ಹಿಂದೆ ಜನರಲ್ಲಿ ಟ್ರಾಫಿಕ್ ಸಮಸ್ಯೆಯ ಬಗ್ಗೆ ಜಾಗ್ರುತಿ ಮಾಡೊಕ್ಕೆ ಅಂತ ಒಂದು ವೀಡಿಯೋ ಮಾಡಿ ಬೆಂಗಳೂರಿನ ಚಿತ್ರ ಮಂದಿರಗಳಲ್ಲಿ ಚಿತ್ರ ಪ್ರದರ್ಶನಕ್ಕೆ ಮೊದಲು ಪ್ರದರ್ಶನ ಮಾಡೊ ವ್ಯವಸ್ತೆ ಮಾಡಿದ್ದಾರೆ. ಇದು ಒಂದು ಉತ್ತಮ ನಡೆಯೇ, ಆದ್ರೆ ಈ ವೀಡಿಯೋ ನಲ್ಲಿ ಜಾಗ್ರುತಿಗೆ ಅಂತ ಬಳಸಿರೋದು ಬೆಂಗಳೂರಿನ ಜನರಿಗೆ ಅರ್ತವಾಗದಿರೋ ಹಿಂದಿ ಬಾಶೆನ! ಜಾಗ್ರುತಿ ಮಾಡೊವಾಗ ಬಳಸಬೇಕಾದ್ದು ಜನರಿಗೆ ಗೊತ್ತಿರೋ ಕನ್ನಡ ಬಾಶೆನ ಹೊರೆತು, ಜನರಿಗೆ ತಿಳಿಯದ ಹಿಂದಿ ಬಾಶೆಯನ್ನಲ್ಲ ಅಲ್ವ?

ನಿಜವಾಗಿಯೂ ಪೋಲೀಸ್ ಇಲಾಕೆ ತನ್ನ ಜಾಗ್ರುತಿ ಮೂಡಿಸೋ ಕಾರ್ಯದಲ್ಲಿ ಕನ್ನಡವನ್ನ ಬಳಸಿದ್ರೆ, ಇಂದಿಗಿಂತ ಹೆಚ್ಹು ಪರಿಣಾಮಕಾರಿಯಾಗಿ ಜನರನ್ನ ಜಾಗ್ರುತರನ್ನಾಗಿ ಮಾಡೊಕ್ಕೆ ಸಾದ್ಯ ಅಲ್ವ?

ಟ್ರಾಪಿಕ್ ಸಮಸ್ಯೆಯನ್ನ ಜನರಲ್ಲಿ ಜಾಗ್ರುತಿ ಮಾಡೊದ್ರಿಂದ ಮಾತ್ರ ಕಡಿಮೆ ಮಾಡಬಹುದು, ಜಾಗ್ರುತಿಗೆ ಬಳಸೋ ಬಾಶೆ ಕೂಡ ಜನರಿಗೆ ಅರ್ತ ಆಗೋ ಬಾಶೆ, ಕನ್ನಡ ಆಗಿರಬೇಕು ಅಲ್ವ? ಏನಂತೀರ.

ಬುಧವಾರ, ಜೂನ್ 1, 2011

ಕನ್ನಡ ಪ್ರೇಕ್ಷಕರಿಗೆ ತಿಳುವಳಿಕೆ ಇಲ್ವ?


ಡಬ್ಬಿಂಗ್ ಬೇಡ ಎಂದು ಹೇಳುತ್ತಿರುವ ಬಿ ಸುರೇಶ ರವರು ಫೇಸ್ ಬುಕ್ ನಲ್ಲಿ ಕೆಲವು ಡಬ್ಬಿಂಗ್ ಪರವಾದ ಮಾತುಗಳನ್ನು ಪಟ್ಟಿ ಮಾಡಿ ಅದಕ್ಕೆ ಉತ್ತರಿಸಲು ಪ್ರಯತ್ಸಿಸಿದ್ದಾರೆ. ಡಬ್ಬಿಂಗ್ ಪರವಾದ ಹೆಚ್ಚು ಕಡಿಮೆ ಎಲ್ಲಾ ಮಾತುಗಳನ್ನ ಪಟ್ಟಿಮಾಡಿದ್ದಕ್ಕಾಗಿ ಮತ್ತು ಅದಕ್ಕೆ ಅರೋಗ್ಯಕರ ರೀತಿಯಲ್ಲಿ ಉತ್ತರಿಸಲು ಪ್ರಯತ್ಸಿಸಿದ್ದಕ್ಕೆ ನಾನು ಅಬಿನಂದಿಸುತ್ತೇನೆ.

ಡಬ್ಬಿಂಗ್ ಪರವಾದ ಮಾತುಗಳಲ್ಲಿ ಡಬ್ಬಿಂಗ್ ಬೇಕೆ ಬೇಡವೇ ಅನ್ನೊದನ್ನ ಪ್ರೇಕ್ಷಕ(ಮಾರುಕಟ್ಟೆ) ನಿರ್ದರಿಸರಿ ಅನ್ನೋದು ಒಂದು. ಇದೇ ವಾದ ನನ್ನದೂ ಕೂಡ. ಇದೇ ವಿಶಯವಾಗಿ ನನ್ನ ಬ್ಲಾಗಿನಲ್ಲೂ ಸಹ ಒಂದು ಲೇಖನ ಬರೆದಿದ್ದೇನೆ. ಆದರೆ ಡಬ್ಬಿಂಗ್ ಬೇಕೆ ಬೇಡವೇ ಎಂದು ಮಾರುಕಟ್ಟೆ ನಿರ್ದರಿಸೋದು ಸರಿ ಅಲ್ಲ ಅನ್ನೋ ಹಾಗೆ ಬಿ ಸುರೇಶ ರವರು ಹೇಳಿದ್ದಾರೆ. ಇದರ ಬಗ್ಗೆ ಅವರ ಉತ್ತರ ನೋಡಿ-

'ಡಬ್ಬಿಂಗ್ ಬೇಕೆ ಬೇಡವೇ ಎಂದು ಮಾರುಕಟ್ಟೆ ನಿರ್ಧರಿಸಲಿ’ ಎಂದು ಹಲವರು ಹೇಳಿದ್ದಾರೆ. ಇದು ಸರಿಯಾದ ಮಾರ್ಗವಲ್ಲ. ಆ ಉದ್ಯಮದಲ್ಲಿ ಇರುವವರು ಮತ್ತು ಅದನ್ನು ಬಳಸುತ್ತಾ ಇರುವವರ ನಡುವೆ ಅನೇಕ ಚರ್ಚೆಯಾಗಬೇಕು. ಆ ಮೂಲಕ ಪ್ರಯೋಗಗಳು ಆಗಬೇಕು. ಇಲ್ಲವಾದರೆ ಸರಿಯಾಗಿ ಕುಡಿಯುವ ನೀರೇ ಇಲ್ಲದ, ಫ್ಲೋರೈಡ್‌ ಯುಕ್ತ ನೀರು ಕುಡಿದು ನರಳುತ್ತಿರುವವರಿರುವ ಹಳ್ಳಿಗಳಲ್ಲಿ ಧಾರಾಳವಾಗಿ ಪೆಪ್ಸಿ, ಕೋಕಾಕೋಲ ಸಿಗುತ್ತಿರುವಂತೆ ಆಗುತ್ತದೆ. ಯಾವುದೇ ಸರಕಿನ ಲಾಬಾಲಾಭಗಳ ತಿಳುವಳಿಕೆ ಇಲ್ಲದ ಸಮಾಜಕ್ಕೆ ಅಂತಹ ಸರಕನ್ನು ಬಳಸಿ ಎಂದು ಹೇರುವುದು ಆ ಸಮಾಜಕ್ಕೆ ಮಾಡುವ ಅಪರಾಧ ಎಂದು ನೋಮ್‌ ಚಾಮ್‌ಸ್ಕಿ ಯಂತಹ ಹಿರಿಯ ಅರ್ಥಶಾಸ್ತ್ರಜ್ಞರು. ಸಮಾಜ ಚಿಂತಕರು ಮಾಡಿರುವ ಚರ್ಚೆಗಳನ್ನು ಇದಕ್ಕಾಗಿ ಗಮನಿಸಬಹುದು. ಆ ಪುಸ್ತಕಗಳನ್ನು ಓದಲಾಗದವರು ಆಫ್ರಿಕಾದ ಗಿರಿಜನರ ಕಾಡಿನೊಳಗೆ ಬಂದು ಬೀಳುವ ಕೋಕ್ ಬಾಟಲಿಯಿಂದ ಒಂದು ಸಮಾಜವೇ ತಲ್ಲಣಗೊಳ್ಳುವ ಕತೆಯನ್ನುಳ್ಳ ಮಾತಿಲ್ಲದ ಸಿನಿಮಾ ನೋಡಬಹುದು. ಅಂತಹ ಸ್ಥಿತಿ ನಮ್ಮ ಸಮಾಜದ ಕಟ್ಟಕಡೆಯ ವ್ಯಕ್ತಿಗೆ ಬರಬಾರದು. ಹೀಗಾಗಿ ಡಬ್ಬಿಂಗ್ ಬೇಕೆ ಬೇಡವೇ ಎಂಬ ವಿಷಯವನ್ನು ಪ್ರೇಕ್ಷಕರು ಅಥವಾ ಮಾರುಕಟ್ಟೆ ನಿರ್ಧರಿಸಲಿ ಎಂಬ ಮಾತು ಸರಿಯಾಗುವುದಿಲ್ಲ.

ಅವರ ಮಾತಿನ ಮೊದಲಿನಲ್ಲಿ ” ಉದ್ಯಮದಲ್ಲಿ ಇರುವವರು ಮತ್ತು ಅದನ್ನು ಬಳಸುತ್ತಾ ಇರುವವರ ನಡುವೆ ಅನೇಕ ಚರ್ಚೆಯಾಗಬೇಕು ಆ ಮೂಲಕ ಪ್ರಯೋಗಗಳು ಆಗಬೇಕು.” ಎಂದು ಹೇಳಿದ್ದಾರೆ ಇದು ಒಪ್ಪುವಂತಹ ಮಾತೆ, ಚರ್ಚೆ ಆಗಬೇಕೆ ಹೊರೆತು ಉದ್ಯಮದಲ್ಲಿ ಇರುವವರೇ ಬಳಸುವವರಿಗೆ ಏನು ಬೇಕು ಅಂತ ನಿರ್ದಾರ ಮಾಡೋದು ಎಶ್ಟು ಸರಿ? ಬಿ ಸುರೇಶರವರು ಹೇಳಿದ ಹಾಗೆ ಡಬ್ಬಿಂಗ್ ವಿಶಯವಾಗಿ ಯಾವುದಾದರೂ ಚರ್ಚೆ ನಡೆದಿದೆಯೇ ಅತವಾ ಡಬ್ಬಿಂಗ್ ಪ್ರಯೋಗಗಳು ನಡೆದಿದೆಯೇ? ಚರ್ಚೆ ನಡೆಯದೇ...... ಪ್ರಯೇಗ ನಡೆಸದೇ...... ಡಬ್ಬಿಂಗ್ ಬೇಡ ಅನ್ನೊದು ಎಶ್ಟು ಸರಿ?ಡಬ್ಬಿಂಗ್ ಪ್ರಯೋಗ ಆಗಲೇ ಬಾರದು ಅಂತ ಟೊಂಕ ಕಟ್ಟಿ ನಿಂತಿರೋ ಉದ್ಯಮದೊಳಗಿನ ಜನರನ್ನ ಏನನ್ನಬೇಕು

ಇದೇ ಉತ್ತರದ ಇನ್ನೊಂದೆಡೆ ಒಬ್ಬ ಹಿರಿಯ ಅರ್ತಶಾಸ್ತ್ರಜ್ನ ರ ಮಾತನ್ನ ಉಲ್ಲೆಕಿಸುತ್ತಾ ಲಾಬಾಲಾಬಗಳ ತಿಳುವಳಿಕೆ ಇಲ್ಲದ ಸಮಾಜಕ್ಕೆ ಅಂತಹ ಸರಕನ್ನ ಬಳಸಿ ಎಂದು ಹೇರುವುದ ಅಪರಾದ ಅಂತ ಹೇಳಿದ್ದಾರೆ. ಕನ್ನಡ ಪ್ರೇಕ್ಷಕ ಸಮಾಜ ಯಾವುದು ಸರಿ, ಯಾವುದು ತಪ್ಪು ಅನ್ನೊ ತಿಳುವಳಿಕೆ ಇಲ್ಲದ್ದೇ? ಅತವಾ ಕನ್ನಡದ ಪ್ರೇಕ್ಷಕರು ಲಾಬಲಾಬಗಳ ತಿಳುವಳಿಕೆ ಇಲ್ಲದವರೇ? ಪ್ರೇಕ್ಷಕರನ್ನ ತಿಳುವಳಿಕೆ ಇಲ್ಲದವರು ಅನ್ನೊದು ಮತ್ತು ಆ ರೀತಿಯ ವಾಕ್ಯಗಳ ಜೊತೆ ಉಲ್ಲೇಕಿಸಿ ಹೇಳೋದು ಸರಿಯೇ?


ಕನ್ನಡದ ಪ್ರೇಕ್ಷಕರಿಗೆ ಯಾವುದು ಸರಿ ಯಾವುದು ತಪ್ಪು ಅಂತ ನಿರ್ದಾರ ಮಾಡೋ ಸ್ವಾತಂತ್ರ ಮತ್ತು ತಿಳುವಳಿಕೆ ಇದೆ. ಡಬ್ಬಿಂಗ್ ಸಿನೆಮಾ ಬಿಡುವುದರಿಂದ ನಿಜವಾಗಿಯೂ ಪ್ರೇಕ್ಷಕರ ಸ್ವಾತಂತ್ರಕ್ಕೆ ಮತ್ತು ತಿಳುವಳಿಕೆಗೆ ಗೌರವ ನೀಡಿದಂತಾಗುತ್ತದೆ.

ಪ್ರೇಕ್ಷಕನಿಗೆ ಗೌರವ ಮತ್ತು ಸ್ವಾತಂತ್ರ ನೀಡೋ ಮನಸ್ಸು ಡಬ್ಬಿಂಗ್ ವಿರೋದಿಸೋ ಉದ್ಯಮದ ಜನರಿಗೆ ಇದೆಯೇ?

ಭಾನುವಾರ, ಮೇ 29, 2011

ಇದು ಹಿಂದಿ ಹೇರಿಕೆ ಬೂತದ ಕೈಚಳಕ

ಸರಕಾರ ತನ್ನ ಕಾರ್ಯಗಳು ಜನರಿಗೆ ತಲುಪಿಸೊಕ್ಕೆ ಪತ್ರಿಕೆಗಳನ್ನ ಅವಲಂಬಿಸಿದೆ. ಕೆಲವು ಪ್ರಮುಕ ಕಾರ್ಯಗಳನ್ನ/ ಸೌಲಬ್ಯಗಳನ್ನ ಪತ್ರಿಕೆಗಳಲ್ಲಿ ಜಾಹಿರಾತು ನೀಡಿತ್ತೆ. ಪತ್ರಿಕೆಗಳಲ್ಲಿ ಜಾಹಿರಾತನ್ನ ನೋಡೊ ಜನ, ಆ ಕಾರ್ಯ/ಸೌಲಬ್ಯದ ಲಾಬ ಪಡೆದುಕೊಳ್ಳಬೇಕು ಅನ್ನೊದು ಉದ್ದೇಶ(?).

ಆದರೆ ಸರಕಾರ ಈ ಜಾಹಿರಾತು ನೀಡೋ ವಿಶಯದಲ್ಲೂ ತಾರತಮ್ಯ ಮಾಡಿ ತನ್ನ ಕಾರ್ಯ/ ಸೌಲಬ್ಯ ಗಳು ಕನ್ನಡಿಗರಿಗೆ ಸಿಗಬಾರ್ದು ಅನ್ನೊ ತರ ನಡೆದುಕೊಳ್ತಿರೋದು ಮಾತ್ರ ನಿಗೂಡ! ಇದೋ ಹೀಗೆ ಅಂತೀರ- ಕನ್ನಡ ಪತ್ರಿಕೆಗಳಲ್ಲಿ ಕನ್ನಡವಲ್ಲದ, ಕನ್ನಡಿಗರಿಗೆ ಅರಿವಿಲ್ಲದ ಹಿಂದಿ ಬಾಶೆಯಲ್ಲಿ ಜಾಹಿರಾತು ನೀಡೋದು.

ಈ ಕೆಲ್ಸವನ್ನ ಸರಕಾರ ಬಹಳ ವ್ಯವಸ್ತಿತವಾಗಿ ಮಾಡ್ತಿದೆ. ಇದರ ಕೆಲವು ಕೆಲವು ಸ್ಯಾಂಪಲ್ ಗಳು-

೧. ಕೆಲವು ವರ್ಶಗಳ ಹಿಂದೆ ನೈರುತ್ಯ ರೈಲ್ವೆ ,ಡಿ ದರ್ಜೆ ನೌಕರರಿಗೆ(೭ ಅತವಾ ೮ ನೇ ತರಗತಿ ಪಾಸಾದವರಿಗೆ) ಅರ್ಜೆಗೆ ಅಹ್ವಾನಿಸಿ, ಕನ್ನಡವಲ್ಲದ ಬಾಶೆಯಲ್ಲಿ ಯಾವುದೋ ಒಂದೆರಡು ಚಿಕ್ಕ ಪತ್ರಿಕೆಗಳಲ್ಲಿ ಜಾಹಿರಾತು ನೀಡಿತ್ತಂತೆ. ಆ ಜಾಹಿರಾತು ಓದೋಕ್ಕೆ ಆಗದ ಕನ್ನಡದವರು ಅರ್ಜಿ ಹಾಕಿದ್ದೆ ಕಡಿಮೆ ಜನ. ಎಂತಾ ದುರಂತ.



೨. ಸ್ವಲ್ಪ ದಿನಗಳ ಹಿಂದೆ ವಿಕ ನಲ್ಲಿ, ರೈಲ್ವೆಯಲ್ಲಿ ಪ್ರಯಣಿಕರ ಸುರಕ್ಷತೆಯ ಅರಿವಿಗಾಗಿ ನೀಡೋ ಜಾಹಿರಾತು ಹಿಂದಿಯಲ್ಲಿ ಇತ್ತು. ಏನಪ್ಪ ಕನ್ನಡಿಗರ ಸುರಕ್ಷತೆ ಸರಕಾರಕ್ಕೆ ಬೇಡ್ವ?





೩. ಮಿನಿಸ್ಟ್ರಿ ಆಫ್ ಓವರ‍್ಸೀಸ್ ಇಂಡಿಯನ್ ಅಫೇರ್ಸ್ ಇನ್ನು ಒಂದು ಹೆಜ್ಜೆ ಮುಂದೆ ಹೋಗಿ ಹಿಂದಿ ಬಾಶೆಯ ವಾಕ್ಯವನ್ನ ಕನ್ನಡ ಲಿಪಿನಲ್ಲಿ ಬರೆದು ಜಾಹಿರಾತು ಹಾಕಿದೆ. ಇದು ಕಾಟಾಚಾರಕ್ಕೆ ಹಾಕಿರೋದೇ ಅಲ್ವ? ಜಾಹಿರಾತು ಕೊಟ್ಟಂಗು ಇರ್ಬೇಕು, ಕೊಡದೇ ಇರೋ ಹಾಗೂ ಇರಬೇಕು. ನಮ್ ದುಡ್ಡು , ಹಿಂದಿ ಜಾತ್ರೆ.







೪. ಮೊನ್ನೆ ಮತ್ತೆ ರೈಲ್ವೆ , ವಿಕ ನಲ್ಲಿ ಜಾಹಿರಾತು ನೀಡಿದೆ. ದೇವರಾಣೆ ಯಾಕೆ ಅಂತ ನನಗಂತೂ ಗೊತ್ತಾಗ್ಲಿಲ್ಲ.





ಇವು ಬರಿ ಸ್ಯಾಂಪಲ್ ಗಳು ಅಶ್ಟೆ! ಕನ್ನಡ ಪತ್ರಿಕೆಗಳಲ್ಲಿ ಹಿಂದಿ ಜಾಹಿರಾತುಗಳ ಸುರಿಮಳೆನೇ ಆಗ್ತಿದೆ.

ಹಿಂದಿ ಗೊತ್ತಿರೋರಿಗೆ ಮಾತ್ರ ಸೌಲಬ್ಯಗಳು ಸಿಕ್ಲಿ

ಈ ಮೇಲಿನವು ಕನ್ನಡಿಗರ ಅತವಾ ಹಿಂದಿಯೇತರರ ಮೇಲೆ ನಡೆಯುತ್ತಿರೋ ಹಿಂದಿ ಹೇರಿಕೆ ಬೂತದ ಕೈಚಳಕ. ಮತ್ತೆ ಮತ್ತೆ ಕನ್ನಡಪತ್ರಿಕೆಗಳಲ್ಲಿ ಹಿಂದಿಯಲ್ಲಿ ಜಾಹಿರಾತು ನೀಡ್ತಿರೋದನ್ನ ನೋಡಿದ್ರೆ, ಇವು ಏನೋ ಗೊತ್ತಿಲ್ಲದೇ ಆಗಿರೋ ತಪ್ಪ್ಪು ಅಂತ ಅನ್ನಿಸಲ್ಲ, ಈ ಕೆಲ್ಸ ಬಹಳ ವ್ಯವಸ್ತಿತವಾಗಿ ನಡಿತಿದೆ ಅನ್ನೋದಂತು ಡೆಪೆನೆಟ್ ಆಗಿ ಹೇಳ್ಬಹುದು. ಮತ್ತ್ತೆ.. ಈ ಜಾಹಿರಾತುಗಳನ್ನ ನೋಡಿದ್ರೆ, ಹಿಂದಿ ಗೊತ್ತಿರೋರಿಗೆ ಮಾತ್ರ ಸೌಲಬ್ಯಗಳು ಸಿಕ್ಲಿ. ಅನ್ನೊ ಸಂದೇಶ ಎದ್ದು ಕಾಣಿಸ್ತಿದೆ, ಈ ಸಂದೇಶ ನಿಜಕ್ಕೂ ಆತಂಕ ಹುಟ್ಟಿಸ್ತಿದೆ.

ಹಿಂದಿಯೇತರರೂ ಸೌಲಬ್ಯಗಳ ಅನುಕೂಲ ಪಡೆಯೋಕ್ಕೆ ಹಿಂದಿ ಗೊತ್ತಿರುವವರಶ್ಟೇ ಅಹ೯ರು
ಪ್ರಜಾಪ್ರಬುತ್ವದಲ್ಲಿ ಎಲ್ಲರೂ ಸಮಾನರು. ಪ್ರಜಾಪ್ರಬುತ್ವವನ್ನ ಪ್ರತಿನಿದಿಸುತ್ತಿರೋ ಸರಕಾರನೇ, ಹಿಂದಿ ಗೊತ್ತಿದ್ರೆ ಮಾತ್ರ ಸೌಲಬ್ಯ ಅನ್ನೊ ಹಾಗಿನ ವ್ಯವಸ್ಥೆ ನಿರ್ಮಾಣ ಮಾಡೊಕ್ಕೆ ಹೊರಟಿರೋದು ಸರಿನಾ? ಪ್ರಜಾಪ್ರಬುತ್ವದಲ್ಲಿ ಕನ್ನಡಿಗರೂ, ಸರಕಾರದ ಕಾರ್ಯ/ ಸೌಲಬ್ಯಗಳ ಅನುಕೂಲ ಪಡೆಯೋಕ್ಕೆ ಹಿಂದಿ ಗೊತ್ತಿರುವವರಶ್ಟೇ ಅಹ೯ರು ಅಲ್ವ?

ಈ ಹಿಂದಿ ಹೇರಿಕೆ ಬೂತದಿಂದ ಮುಕ್ತಿ ಯಾವಗ?

ಸೋಮವಾರ, ಮೇ 2, 2011

ಜಾತ್ರೆ,ಉತ್ಸವ, ಸಮ್ಮೇಳನಗಳ ಆಯೋಜಕರಿಗೆ ಕನ್ನಡದ ಬಗ್ಗೆ ಬದ್ದತೆಯಿದೆಯೇ?


ಸರಕಾರ ಜನರ ಸುಂಕದ ಹಣದಲ್ಲಿ ಕನ್ನಡ ಸಮ್ಮೇಳನಗಳು, ಉತ್ಸವಗಳನ್ನ ನಡೆಸುತ್ತಿದೆ. ಆ ಸಮ್ಮೇಳನಗಳ, ಉತ್ಸವಗಳ ಉದ್ದೇಶ ಸರಿಯಾಗಿಯೇ ಇರಬಹುದು, ಆದ್ರೆ ಆ ಕಾರ್ಯಕ್ರಮಗಳು ನಡೆಯುವಾಗ ನಮ್ಮ ನಾಡಿಗೆ ಸಿಗಬೇಕಾದ ಮನ್ನಣೆ ಮತ್ತು ನಂತರದ ದಿನದಲ್ಲಿ ಕಾರ್ಯಕ್ರಮಗಳಿಂದ ಆಗಬೇಕಾದ ಬದಲಾವಣೆಗಳು ಆಗದಿರುವುದರಿಂದ ನಿಜವಾಗಿಯೂ ಈ ಸಭೆ ಸಮ್ಮೇಳನ, ಉತ್ಸವಗಳಿಗೆ ಕೋಟಿ ಕೋಟಿ ಹಣ ಸುರಿಯುವ ಅವಶ್ಯಕತೆ ಇದಯೇ



ಕೋಟಿ ಕೋಟಿ ಸುರಿದು ನಡೆಸುವ ಸಭೆ ಸಮಾರಂಬಗಳಲ್ಲಿ ಕನ್ನಡ-ಕನ್ನಡಿಗ-ಕರ್ನಾಟಕದ ಏಳಿಗೆ ಬಗ್ಗೆ, ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಿ, ನಾಡಿನ ಏಳಿಗೆಗೆ/ ನಾಡಿನ ಸಮಸ್ಯೆಯ ಪರಿಹಾರಕ್ಕೆ ಬೇಕಾದ ನಿರ್ಣಯಗಳನ್ನು ತೆಗೆದುಕೊಂಡು, ಆ ನಿರ್ಣಯಗಳ ಜಾರಿಗೊಳಿಸಿದಾಗಲೇ ಆ ಸಮ್ಮೇಳನಗಳು ಯಶಸ್ವಿಯಾದಂತೆ. ಸಮ್ಮೇಳನಗಳ ವೇದಿಕೆಯಲ್ಲಿ ಕನ್ನಡ.. ಕನ್ನಡ ಅನ್ನೊ ಸರಕಾರ, ಕಾರ್ಯಕ್ರಮ ಮುಗಿದ ನಂತರ ಕನ್ನಡವನ್ನೇ ಮರೆಯುತ್ತಿರುವುದು ಸರಿಯೇ? ನಿರ್ಣಯಗಳನ್ನು ತೆಗೆದುಕೊಡು, ನಿರ್ಣಯವನ್ನ ಜಾರಿಗೊಳಿಸದೇ, ಜನ ಸೇರಿದ್ದೇ ಯಶಸ್ವಿಯೆನ್ನುವುದು ಎಶ್ಟು ಸರಿ?

ಇದೀಗ ನಮ್ಮ ಮುಕ್ಯ ಮಂತ್ರಿಗಳ ಪೋಟೋ ಜೊತೆಗೆ, ಕಳೆದ ತಿಂಗ್ಳು ನಡೆದ ವಿಶ್ವ ಕನ್ನಡಿಗರ ಸಮ್ಮೇಳನ ಯಶಸ್ವಿ ಅಂತ ಎಲ್ಲಾ ಕಡೆ ಜಾಹಿರಾತು ನೀಡ್ತಿದ್ದಾರೆ. ನಿಜವಾಗಿಯೂ ವಿಶ್ವ ಕನ್ನಡಿಗರ ಸಮಾವೇಶ ಯಶಸ್ವಿ ಯಾಗಿದಿಯೇ?ಸಮ್ಮೇಳನ ನಡೆದ ಕೆಲವೇ ದಿನದಲ್ಲಿ ನಾಡ ವಿರೋದಿಗಳು ಬೆಳಗಾವಿ ನಗರ ಪಾಲಿಕೆಯಲ್ಲೇ ಮೇಲುಗೈ ಸಾದಿಸಲು ಸಹಾಯ ಮಾಡಿದವರು ಸಮ್ಮೇಳನ ಯಶಸ್ವಿ ಅನ್ನೋದು ಸರಿಯೇ? ೨೦ ಲಕ್ಷ ಜನ ಬಂದಿದಾರೆ ಅಂದ್ರೆ ಅದು ಯಶಸ್ವಿಯೇ? ಗಡಿನಾಡಿನಲ್ಲಿ ನಡೆದ ಸಮ್ಮೇಳನದಿಂದ ಬೆಳಗಾವಿಯಲ್ಲಿ ಕನ್ನಡದ ವಾತಾವರಣ ನಿರ್ಮಾಣವಾಗಬೇಕು, ವಿಬಜನೆಯ ಕೂಗು ನಿಲ್ಲಬೇಕು ಎನ್ನೋ ಆಶಯ ಏನಾಯಿತು?

ಇದರ ಜೊತೆಗೆ ಸರಕಾರ ಗಡಿ ನಾಡಿನ ಜಿಲ್ಲೆಗಳಲ್ಲಿ ಉತ್ಸವಗಳನ್ನ ನಡೆಸುತ್ತಿದೆ. ಇಲ್ಲಿ ಆಯಾ ಜಿಲ್ಲೆಯ ಕಲಾವಿದರಿಗೆ ಅವಕಾಶ ಸಿಗಬೇಕು ಅಲ್ವ? ಜೊತೆಗೆ ಆಯಾ ಜಿಲ್ಲೆಯ ಕಲೆ ಸಂಸ್ಕೃತಿ ಗೆ ಮನ್ನಣೆ ಸಿಗ್ಬೇಕು ಅಲ್ವ?ಈ ಉತ್ಸವಗಳ ಮೂಲಕ ಸರಕಾರ ಗಡಿ ಪ್ರದೇಶದಲ್ಲಿ ಕನ್ನಡದ ವಾತಾವರಣ ನಿರ್ಮಿಸಲು ಉಪಯೋಗಿಸಿಕೊಳ್ಳಬಹುದಿತ್ತು. ಆದ್ರೆ ಇಲ್ಲಿ ನಡಿತಿರೋದೇ ಬೇರೆ, ಬೀದರ್, ಗುಲ್ಬರ್ಗ ಉತ್ಸವದಲ್ಲಿ ಕಾಟಾಚಾರಕ್ಕೆ ಕನ್ನಡ ಕಾರ್ಯಕ್ರಮ ನಡೆಸಿ, ಹೆಚ್ಚು ಹೆಚ್ಚು ಹಿಂದಿ ಕಾರ್ಯಕ್ರಮ ನ ಆಯೋಜಿಸ್ತಿರೋದು ನೋಡಿದ್ರೆ ಸರಕಾರನೇ ಈ ಉತ್ಸವಗಳ ಮೂಲಕ ಹಿಂದಿ ಬಾಶೆಗೆ ಮಾರುಕಟ್ಟೆ ನಿರ್ಮಿಸಲು ಹೊರಟಿರುವುದು ಒಂದು ದುರಂತ.

ಇನ್ನು ನಾಡ ಹಬ್ಬ ಮೈಸೂರು ದಸರ, ಹಂಪಿ ಉತ್ಸವಕ್ಕೆ ಬಂದರೆ, ನಮ್ಮ ನಾಡ ಹಬ್ಬದಲ್ಲಿ ನಮ್ಮ ನಾಡಿನ ವಿಶಯಗಳಿಗೆ ಮನ್ನಣೆ ದೊರೆಯಬೇಕಾದುದ್ದು ನ್ಯಾಯಯುತವಾದುದು, ಇಲ್ಲೇನಾಗ್ತಿದೆ? ಯುವ ದಸರ ಹೆಸರಲ್ಲಿ ಹಿಂದಿ ಕಾರ್ಯಕ್ರಮ ನಡ್ತೆಸಿದ್ದಾರೆ, ಹಂಪಿ ಉತ್ಸವಕ್ಕೆ ಲಕ್ಷಾಂತರ ರೂಪಾಯಿ ಕೊಟ್ಟು ನಮ್ಮ ನಾಡಿಗೆ ಸಂಬಂದವಿಲ್ಲದ ಪರಬಾಶೆಯ ಕಲಾವಿದರಿಂದ ಪರಬಾಶೆಯ ಕಾರ್ಯಕ್ರಮ ನಡೆಸ್ತಿದ್ದಾರೆ.

ಇದನ್ನೆಲ್ಲಾ ನೋಡಿದ್ರೆ ನಿಜವಾಗಿಯೂ ಸಮ್ಮೇಳನ, ಉತ್ಸವ, ಜಾತ್ರೆ, ಹಬ್ಬಗಳನ್ನ ನಡೆಸೋ ಸರಕಾರ ಮತ್ತು ಕಾರ್ಯಕ್ರಮಗಳ ಆಯೋಜಕರಿಗೆ ಕನ್ನಡ-ಕನ್ನಡಿಗ-ಕರ್ನಾಟಕದ ಬಗ್ಗೆ ನಿಜವಾಗಿಯೂ ಬದ್ದತೆಯಿದೆಯೇ ಎನ್ನೊ ಪ್ರಶ್ನೆ ಹುಟ್ಟುತ್ತೆ.

ಗುರುವಾರ, ಏಪ್ರಿಲ್ 28, 2011

ಬಾರತದಲ್ಲಿ ಕನ್ನಡನೂ ಇದೆ. ಹಿಂದಿ ಮಾತ್ರ ಅಲ್ಲ.

ತುಂಬ ದಿನದಿಂದ ವಂಡರ್ ಲಾ ಗೆ ಹೋಗ್ಬೇಕು ಅಂತ ಅಂದ್ಕೊಂಡಿದ್ದೆ ಅದು ನೆನ್ನೆ ನೆರವೇರ್ತು. ನಮ್ಮ ಮನೆಯವರು ಮತ್ತು ನನ್ನ ಸ್ನೇಹಿತರ ಮನೆಯವರು ಜೊತೆಗೆ ಹೋಗಿದ್ವಿ,


ಅಲ್ಲಿ ಸ್ಕೈ ವೀಲ್ ನಲ್ಲಿ ಹೋಗೋಕ್ಕೆ ಅಂತ ೧೩ ಅಂತಸ್ತಿನ ಮಹಡಿಗೆ ಲಿಫ಼್ಟ್ ನಲ್ಲಿ ಹೋದ್ವಿ. ಆಟವನ್ನ ಮುಗಿಸಿ ವಾಪಸ್ ಬರಲು ಮತ್ತೆ ಲಿಪ್ಟ್ ಬಳಿ ಬಂದಾಗ ನಾವು, ಮತ್ತೆ ನಮ್ ಜೊತೆ ಲಿಪ್ಟ್ ಗಾಗಿ ಕಾಯ್ತಿದ್ದ ಚಿಕ್ಕ ಮಕ್ಕಳ ಗುಂಪೊಂದಿತ್ತು. ಅಲ್ಲೊಬ್ಬ ಸೆಕ್ಯುರಿಟಿ ನವನು ನಿಂತಿದ್ದ, ಲಿಪ್ಟ್ ಎಶ್ಟು ಹೊತ್ತಾದ ಮೇಲೂ ಕೆಳಗಿನಿಂದ ೧೩ ನೆ ಅಂತಸ್ತಿಗೆ ಬರಲೇ ಇಲ್ಲ, ಯಾಕಪ್ಪ ಲಿಪ್ಟ್ ಮೇಲಕ್ಕೆ ಬರ್ತಾನೇ ಇಲ್ಲ, ಏನಾದ್ರು ತೊಂದರೆಯಾಗಿದಿಯ ಅಂತ ಆ ಸೆಕ್ಯುರಿಟಿನವನನ್ನ ಕೇಳಿದಕ್ಕೆ, ಅವನು ಹಿಂದಿ.... ಹಿಂದಿ ಅಂದ, ಸರಿ ನಾವು ಏನಪ್ಪ ನಿಮ್ಮ ವಂಡರ್ ಲಾ ಗೆ ಬಂದು ಏನು ತೊಂದರೆ ಇಲ್ದೇ ವಾಪಸ್ ಹೋಗ್ಬೇಕಾದ್ರೆ ಹಿಂದಿ ಕಲಿತು ಬರ್ಬೇಕಾ ಅಂದ್ವಿ. ಅದುಕ್ಕೆ ಅವನು ಹಿಂದಿ ರಾಶ್ಟ್ರಬಾಶೆ , ಬಾರತದಲ್ಲಿ ಇರ್ಬೇಕು ಅಂದ್ರೆ ಹಿಂದಿ ಗೊತ್ತಿರಬೇಕು, ಇದು ಬಾರತ... ಇದು ಬಾರತ.... ಅಂತ ಹೇಳ್ತಿರ್ಬೇಕಾದ್ರೆ, ನಮ್ ಜೊತೆ ಇದ್ದ ಮಕ್ಕಳ ಗುಂಪಿಂದ ಒಂದು ಚಿಕ್ಕ ಹುಡುಗಿ(ಸುಮಾರು ೫ ನೆ ತರಗತಿ ಓಡ್ತಿರಬೇಕು) ಮುಂದೆ ಬಂದು"ಬಾರತದಲ್ಲಿ ಕನ್ನಡನೂ ಇದೆ ಹಿಂದಿ ಮಾತ್ರ ಅಲ್ಲ! "ಅಂತ ಹೇಳಿದ್ಲು. ಬಾರತದಲ್ಲಿ ಕನ್ನಡನೂ ಇದೆ ಅನ್ನೊದು ಆ ಪುಟ್ಟ ಹುಡುಗಿಗೆ ಕೂಡ ಗೊತ್ತಿದೆ, ಆದ್ರೆ ಇದು ನಮ್ಮ ದೇಶದ ಕೇಂದ್ರ ಸರಕಾರಕ್ಕೆ ಮತ್ತು ಹಿಂದಿನ ರಾಶ್ಟ್ರಬಾಶೆ ಅಂತ ಹೇಳೊ ಹಿಂದಿಯನ್ಸ್ ಗಳಿಗೆ ಗೊತ್ತಿಲ್ವಲ್ಲ.




ನಿಜವಾಗಿಯೂ ಹಿಂದಿಯೇತರರ ಮೇಲೆ ಹಿಂದಿಹೇರಿಕೆ ಮಾಡೋ ಕೇಂದ್ರ ಸರಕಾರ ಮತ್ತು ಒಂದಿಶ್ಟು ಜನ ಹಿಂದಿಯನ್ಸ್ ಗಳು ಹಿಂದಿನ ಸುಳ್ಳ್ ಸುಳ್ಳಾಗಿ ರಾಶ್ಟ್ರಬಾಶೆ ಅಂತ ಹೇಳ್ಕೊಡು ತಿರುಗ್ತಿದ್ದಾರೆ. ಕೇಂದ್ರ ಸರಕಾರಕ್ಕೆ ಮತ್ತು ಹಿಂದಿ ರಾಶ್ಟ್ರಬಾಶೆ ಅನ್ನೊರಿಗೆಲ್ಲಾ ನಾವು ಕೊಡಬೇಕಾದ ಒಂದೇ ಒಂದು ಉತ್ತರ... ಬಾರತದಲ್ಲಿ ಕನ್ನಡನೂ ಇದೆ. ಹಿಂದಿ ಮಾತ್ರ ಅಲ್ಲ.

ಮಂಗಳವಾರ, ಏಪ್ರಿಲ್ 19, 2011

ಡಬ್ಬಿಂಗ್ ಬೇಕು/ಬೇಡ ಅನ್ನೋದನ್ನ ಪ್ರೇಕ್ಷಕ ನಿರ್ಧಾರ ಮಾಡ್ಲಿ




ಮನೋರಂಜನೆ ಎನ್ನೋದು ಎಲ್ಲರ ಹಕ್ಕು, ಒಬ್ಬ ವ್ಯಕ್ತಿ ಮನೊರಂಜನೆಯನ್ನು ತನ್ನ ಭಾಷೆಯಲ್ಲೆ ಪಡೆಯುವುದು ಕೂಡ ಆ ವ್ಯಕ್ತಿಯ ಹಕ್ಕೂ ಕೂಡ. ಇದನ್ನ ತಡೆಯಲು ಯಾವುದೇ ಕಾನೂನು ಮುಂದೆಬರುವುದಿಲ್ಲ. ಇದಕ್ಕಾಗಿಯೇ ಇರಬೇಕು ಇಂದಿಗೂ ಕನ್ನಡಕ್ಕೆ ಡಬ್ ಮಾಡಬಾರದು ಅನ್ನೋ ಕಾನೂನು ಇಲ್ಲ.

ಚಲನಚಿತ್ರಗಳು, ವಾಣಿಜ್ಯ ಮಂಡಳಿ ಅಥವಾ ಇನ್ಯಾವುದೋ ಸಂಸ್ಥೆ ಪ್ರೇಕ್ಷಕನಿಗೆ ನೀಡುತ್ತಿರುವ ಬಿಕ್ಷೆಯಲ್ಲ. ಪ್ರತಿಯೊಬ್ಬ ಪ್ರೇಕ್ಷಕನೂ ತನಗೆ ಬೇಕಾದ ಚಿತ್ರವನ್ನು ದುಡ್ಡು ಕೊಟ್ಟು ನೋಡ್ತಾನೆ ಹೊರೆತು ಬಿಟ್ಟಿಯಾಗಿ ಅಲ್ಲ. ಅದರಿಂದ ಯಾವ ಸಿನೆಮಾ ನೋಡ್ಬೇಕು ಅಥವಾ ಯಾವ ಸಿನೆಮಾ ನೋಡ್ಬಾರ್ದು ಅನ್ನೊದನ್ನ ಪ್ರೇಕ್ಷಕ ನಿರ್ಧಾರ ಮಾಡ್ತಾನೆ. ಕಾನೂನು ಇಲ್ಲದಿದ್ದರೂ ಸಹ, ಕನ್ನಡಿಗನಿಗೆ ಪ್ರಪಂಚದ ಒಳ್ಳೆಒಳೆಯ ಚಿತ್ರಗಳನ್ನು ತನ್ನ ಭಾಷೆಯಲ್ಲೇ ನೋಡಲು ಆಗದಿರುವಂತೆ ಮಾಡಿರುವುದು ಗೋರ ಅಪರಾದ ಮತ್ತು ಇದು ಮಾನವ ಹಕ್ಕುಗಳ ಉಲ್ಲಂಗನೆ ಅಂತಲೂ ಹೇಳಬಹುದಾಗಿದೆ.



ಇಂದು ಡಬ್ಬಿಂಗ್ ಅನ್ನು ವಿರೋಧಿಸುತ್ತಿರುವವರು ಪರಭಾಶೆಯ ಚಿತ್ರವನ್ನೇ ನೋಡುತ್ತಿಲ್ಲ ಎಂದೇನಿಲ್ಲ. ಡಬ್ಬಿಂಗ್ ಸಿನೆಮಾ ಬಿಡುಗಡೆಯಾದರೆ ಬೀದಿಗಿಳಿದು ಹೋರಾಟ ಮಾಡುತ್ತೇನೆ ಎಂದು ಹೇಳೋ ಚಿತ್ರರಂಗದ ನಾಯಕರೊಬ್ಬರ ಮನೆಯಲ್ಲಿ ಇಂದಿಗೂ ಪರಭಾಷೆಯ ಚಿತ್ರಗಳನ್ನ ತಮ್ಮ ಮನೆಗೇ ತರಿಸಿಕೊಂಡು ನೋಡೋ ಸಂಪ್ರದಾಯ ಇದೆಯಂತೆ..... ರಜನೀಕಾಂತ್ ಸೇರಿದಂತೆ ಹಲವಾರು ನಟರ ಅದ್ದೂರಿ ಸಿನೆಮಾಗಳನ್ನು ಬಿಡುಗಡೆಗೂ ಮುಂಚೆ ಈ ಕುಟುಂಬದವರಿಗೆಂದೇ ಒಂದು ಪ್ರದರ್ಶನ ಏರ್ಪಾಡು ಮಾಡಿದ್ದರೆಂದು ಪತ್ರಿಕೆಗಳಲ್ಲಿ ಓದಿದ್ದೇನೆ. ಡಬ್ಬಿಂಗ್ ವಿರೋಧಿಸಿ ಕನ್ನಡಿಗರಿಗೆ ಓಳ್ಳೆಯ ಸಿನೆಮಾಗಳನ್ನು ನೋಡದಂತೆ ಮಾಡಿರೋ ಜನ ತಾವು ಮಾತ್ರ ಆ ಒಳ್ಳೆಯ ಸಿನೆಮಾಗಳನ್ನು ನೋಡೋದನ್ನ ಮಾತ್ರ ಮರೆತಿಲ್ಲ.

ಡಬ್ಬಿಂಗ್ ನಿಂದ ಕನ್ನಡದ ಸಂಸ್ಕೃತಿ ಹಾಳಾಗುತ್ತೆ ಅನ್ನೋ ಜನ ಅದೇ ಕನ್ನಡದ ಚಿತ್ರಗಳನ್ನ ಪರಭಾಷೆಗೆ ಡಬ್ ಮಾಡಿದಾಗ, ತಮ್ಮ ಮಾತನ್ನ ತಾವೇ ಮರೆತುಹೋಗುತ್ತಾರೆ. ನಿಜವಾಗಿಯೂ ಪರಭಾಷೆಯ ಚಿತ್ರಗಳು ಕನ್ನಡಕ್ಕೆ ಡಬ್ ಆದರೆ ಕನ್ನಡದ ಸಂಸ್ಕೃತಿ ಹಾಳಾಗೋದಾದ್ರೆ, ಕನ್ನಡ ಚಿತ್ರ ಬೇರೆ ಭಾಷೆಗೆ ಡಬ್ ಆದಾಗ ಆ ಭಾಷೆಯ ಸಂಸ್ಕೃತಿ ಹಾಳಾಗೋದಿಲ್ವ?

ಡಬ್ಬಿಂಗ್ ನಿಂದ ತೊಂದರೆಗೆ ಒಳಗಾಗೋರು ಒಬ್ರೆ, ಅವ್ರು talent ಇಲ್ಲದೇ ಪರಭಾಷೆಯ ಚಿತ್ರಗಳನ್ನ ಬಟ್ಟಿ ಇಳಿಸಿ ಇದಕ್ಕೆ ಇನ್ಯಾವುದನ್ನೋ ಸೇರಿಸಿ ಕಲೆಸಿ/ಬೆರೆಸಿ ರೀಮೇಕ್ ಮಾಡೋ ಜನ ಮಾತ್ರ. ಕನ್ನಡ ಚಿತ್ರರಂಗದಲ್ಲಿರೋ ನಿಜವಾದ talent ಗಳಿಗೆ ಡಬ್ಬಿಂಗ್ ಅಲ್ಲ, ಇನ್ಯಾವುದೋ ಒಂದು ಬೇರೆ ಗ್ರಹದಿಂದ ಇಳಿದು ಬಂದ್ರು ತೊಂದರೆ ಆಗಲ್ಲ. ಡಬ್ಬಿಂಗ್ ಕನ್ನಡ ಚಿತ್ರ ರಂಗನ ಜರಡಿ ಆಡಿ ಇಲ್ಲಿ talent ಇರೋರು ಮಾತ್ರ ಉಳಿಯೋ ಹಾಗೆ ಮಾಡುತ್ತೆ.

ಡಬ್ಬಿಂಗ್ ವಿರೋಧಿಸೋರು ಕನ್ನಡ...ಕನ್ನಡ.....ಅಂತ ಮುಂದೆ ಹೇಳಿ ಹಿಂದೆ ಪರಭಾಷೆಯ ಚಿತ್ರಗಳಿಗೆ ಕರ್ನಾಟಕದಲ್ಲಿ ಮಾರುಕಟ್ಟೆ ನಿರ್ಮಾಣ ಮಾಡೊಕ್ಕೆ ಹೊರಟು, ಪರಭಾಷೆಯ ಚಿತ್ರರಂಗದ ಏಜೆಂಟ್ಗಳಂತೆ ಆಡ್ತಿರೋದು ಬಹಳ ಆತಂಕಕಾರಿ. ಡಬ್ಬಿಂಗ್ ಗೆ ವಿರೋಧಿಸೋ ಜನ ಪರಬಾಷೆ ಚಿತ್ರ ಕರ್ನಾಟಕದಲ್ಲಿ ಹೆಚ್ಚು ಹೆಚ್ಚು ಕಡೆ ಬಿಡುಗಡೆ ಆಗ್ತಿರೋ ಬಗ್ಗೆ ಯಾಕೆ ಮಾತಾಡ್ತಿಲ್ಲ ಅಥವಾ ಅದಕ್ಕೆ ಪರಹಾರ ಯಾಕೆ ಹುಡುಕ್ತಿಲ್ಲ? ಇದರಿಂದ ನಿಜವಾಗಿಯೂ ಇವರಿಗೆ ಕನ್ನಡದ ಬಗ್ಗೆ ಕಾಳಜಿ ಇದ್ಯ ಅನ್ನೋದೇ ಒಂದು ಪ್ರಶ್ನೆಯಾಗಿದೆ. ಇವರು ಡಬ್ಬಿಂಗ್ ವಿರೋಧಿಸುತ್ತಿರೋದು ತಮ್ಮ ಬೇಳೆ ಬೇಯಿಸಿಕೊಳ್ಳೋಕ್ಕೆ ಹೊರೆತು ಕನ್ನಡಕ್ಕಾಗಿ ಅಲ್ಲ.


ಡಬ್ಬಿಂಗ್ ನಿಂದ ಅದು ಹಾಳಾಗುತ್ತೆ ಇದು ಹಾಳಾಗುತ್ತೆ ಅಂತ ತಮ್ಮ ಬೇಳೆ ಬೇಯಿಸಿಕೊಳ್ಳೊಕ್ಕೆ ಹೊರಟಿರೋ ಜನರ ಮಾತನ್ನ ತಲೆಗೆ ಹಾಕಿಕೊಳ್ಳಬೇಡಿ. ಅದೇ ಜನ ನಾಳೆ ಕಾಫಿ ಶಾಪ್ ಚಿತ್ರ ತೆಲುಗುಭಾಷೆನಲ್ಲಿ ಬಿಡುಗಡೆ ಆದ್ರೆ first day first show ನಲ್ಲಿ ನೋಡ್ತಾರೆ. ಕಾಫಿ ಶಾಪ್ ಚಿತ್ರ ಕನ್ನಡದಲ್ಲಿ ಬಂದ್ರೆ ಒಳ್ಳೆದೇ ಅಲ್ವ? ಸುಮ್ನೆ ಕಾಫಿ ಶಾಪ್ ಚಿತ್ರ ಕನ್ನಡಕ್ಕೆ ಡಬ್ ಆಗೋದನ್ನ ಬೆಂಬಲಿಸಿ. ಬಿಡುಗಡೆ ಆದ್ಮೇಲೆ ಆರಾಮಾಗಿ ಮಲ್ಟಿಪ್ಲೆಕ್ಸ್ ನಲ್ಲಿ ಹೋಗಿ ಕನ್ನಡದಲ್ಲೇ ಸಿನೆಮಾ ನೋಡಿ ಮಜ ಮಾಡಿ.

ಶುಕ್ರವಾರ, ಏಪ್ರಿಲ್ 15, 2011

ಗುಲ್ಬರ್ಗ ಜಿಲ್ಲೆ ಯಾವುದೇ ಕಲೆ/ಕಲಾವಿದರೂ ಇಲ್ಲದಂತಹಾ ಮರುಭೂಮಿಯೇ?


ಕಳೆದ ಕೆಲವು ದಿನಗಳಿಂದ ಕರ್ನಾಟಕ ಸರಕಾರ ಹಲವಾರು ಜಿಲ್ಲೆಗಳಲ್ಲಿ ಉತ್ಸವಗಳನ್ನ ನಡೆಸುತ್ತಿದೆ. ಈ ಕಾರ್ಯಕ್ರಮಗಳು ಕರ್ನಾಟಕದ ಜನರ ತೆರಿಗೆ ಹಣದಲ್ಲಿ ನಡೆಯುತ್ತವೆ. ಈ ಕಾರ್ಯಕ್ರಮಗಳಲ್ಲಿ ಮುಖ್ಯವಾಗಿ ಆಯಾ ಜಿಲ್ಲೆಯ ಮತ್ತು ನಮ್ಮ ನಾಡಿನ ಕಲಾವಿದರ ಕಾರ್ಯಕ್ರಮಗಳಿಗೆ ಅವಕಾಶವಿರಬೇಕು.ಆದರೆ ಆ ಪ್ರದೇಶದ ಮತ್ತು ನಮ್ಮ ನಾಡಿನ ಇತರೇ ಕಲಾವಿದರನ್ನ ಮರೆತಿರುವ ಸರಕಾರ ಹೊರ ರಾಜ್ಯದಿಂದ ಕಲಾವಿದರನ್ನ ಕರೆಸಿ ಉತ್ಸವಗಳನ್ನ ನಡೆಸುತ್ತಿದೆ.

ಕಳೆದ ಕೆಲವು ದಿನಗಳ ಹಿಂದೆ ನಡೆದ ಬೀದರ್ ಉತ್ಸವದಲ್ಲಿ ಶೇಕಡಾ 90% ರಷ್ಟು ಕಾರ್ಯಕ್ರಮ ನಡೆಸಿಕೊಟ್ಟವರು ಬೀದರ್ ಜಿಲ್ಲೆಗಾಗಲೀ ಅಥವಾ ನಮ್ಮ ನಾಡಿಗೆ ಯಾವುದೇ ಸಂಭಂದವಿಲ್ಲದವರು. ಇದೀಗ ಇದೇ ಏಪ್ರಿಲ್ 15 ರಿಂದ 17 ರ ವರೆಗೆ ಕರ್ನಾಟಕ ಸರಕಾರ ಗುಲ್ಬರ್ಗ ಉತ್ಸವವನ್ನ ಆಯೋಜಿಸಿದೆ. ಯಾವೂದೇ ಅನುಮಾನವಿಲ್ಲದಂತೆ ಈ ಕಾರ್ಯಕ್ರಮಕ್ಕೂ ಸಹ ಪರಭಾಷಿಕರಿಗೆ ಬಹುಪರಾಗ್ ಹೇಳಲಾಗಿದೆ.

ಗುಲ್ಬರ್ಗ ಉತ್ಸವದ ಕಾರ್ಯಕ್ರಮಗಳ ಪಟ್ಟಿಯಲ್ಲಿ ಗುಲ್ಬರ್ಗ ಜಿಲ್ಲೆಯ ಒಬ್ಬೇ ಒಬ್ಬ ಕಲಾವಿದನಿದ್ದಂತಿಲ್ಲ! ಗುಲ್ಬರ್ಗ ಜಿಲ್ಲೆ ಯಾವುದೇ ಕಲಾವಿದರೂ ಇಲ್ಲದಂತಹಾ ಮರುಭೂಮಿಯೇ? ಜೊತೆಗೆ ಶಿವರಾಜ್ ಕುಮಾರ್, ಐಂದ್ರಿತಾ ರೇ ರವರನ್ನ ಬಿಟ್ರೆ ಇನ್ನೊಬ್ಬ ಕರ್ನಾಟಕದ ಕಲಾವಿದನಿದ್ದಂತಿಲ್ಲ. ಕಾರ್ಯಕ್ರಮದಲ್ಲಿ ಕಾಟಾಚಾರಕ್ಕೆ ಕರ್ನಾಟಕದ ಕಲಾವಿದರನ್ನ ಕರೆಸಿ ಯಾರೋ ಗುಲ್ಬರ್ಗ ಗೂ ಕರ್ನಾಟಕಕ್ಕೂ ಹತ್ತಿರದ ಸಂಬಂಧವಿರಲಿ ದೂರದ(10000 ಕಿಲೋಮೀಟರ್ ಗಿಂತ ಹೆಚ್ಚು ಅಂದುಕೊಳ್ಳಬಹುದು) ಸಂಬಂದವೂ ಇಲ್ಲದ ಹಿಂದಿಯ ಸುನಿದಿ ಚೌಹಾನ್, ಮಿಕಾ ಸಿಂಗ್, ಶಕ್ತಿಕುಮಾರ್, ಅದ್ನಾನ್ ಸಾಮಿ,ವಾರಸಿ ಸಹೋದರರಿಗೆ ರಾಜಗಂಬಳಿ ಹಾಸಿ ಸ್ವಾಗತ ನೀಡಲಾಗಿದೆ. ಈ ರೀತಿಯ ಕಾರ್ಯಕ್ರಮಗಳ ಮೂಲಕ ಸರಕಾರವೇ ಹಿಂದಿ ಭಾಷೆಗೆ ಮಾರುಕಟ್ಟೆ ನಿರ್ಮಿಸಲು ಹೊರಟಿರುವುದು ದುರಂತ!!!!

ಗುಲ್ಬರ್ಗ ಉತ್ಸವ, ಗುಲ್ಬರ್ಗ ಜಿಲ್ಲೆಯ ಕಲೆ ಸಂಸ್ಖೃತಿಯ ಪ್ರತೀಕವಾಗಬೇಕಾಗಿತ್ತು. ಗುಲ್ಬರ್ಗ ಜಿಲ್ಲೆಯ ಕಲಾವಿದರಿಗೆ, ಕಲೆಗೆ ಪ್ರಾಮುಖ್ಯತೆ ದೊರೆಯಬೇಕಾಗಿತ್ತು.ಆದರೆ ಆಗಿದ್ದೇ ಬೇರೆ. ಖಾಸಗಿಯಾಗಿ ಹೊರ ರಾಜ್ಯದಿಂದ ಕಲಾವಿದರನ್ನ ಕರೆಸಿ ಕಾರ್ಯಕ್ರಮ ನಡೆಸಿದ್ದರೆ ಯಾರೂ ತೆಲೆಕೆಡೆಸಿಕೊಳ್ಳೊ ಅವಶ್ಯಕತೆ ಇರ್ತಿರ್ಲಿಲ್ಲ, ಆದ್ರೆ ನಮ್ಮ ನಾಡಿನ ಕಲೆ/ಕಲಾವಿದರಿಗೆ ಉತ್ತೇಜನ ನೀಡಬೇಕಾದ ಸರಕಾರವೇ ನಮ್ಮ ನಾಡಿನ ಕಲೆ/ಕಲಾವಿರರನ್ನ ಮೂಲೆಗುಂಪು ಮಾಡಿ ಹೊರ ರಾಜ್ಯದ ಕಲೆ/ ಕಲಾವಿದರಿಗೆ ಪ್ರಾಮುಖ್ಯತೆ ನೀಡೋದು ಎಷ್ಟು ಸರಿ? ಕರ್ನಾಟಕದವರ ತೆರಿಗೆ ಹಣದಲ್ಲಿ ಈ ರೀತಿ ಕಾರ್ಯಕ್ರಮ ನಡೆಸೋದ್ರಿಂದ ಕರ್ನಾಟಕಕ್ಕೆ, ಕನ್ನಡಿಗರಿಗೆ, ಕನ್ನಡಕ್ಕೆ ಏನು ಉಪಯೋಗ?

ಕೊನೆಯದಾಗಿ- ಸರಕಾರ ಕೋಟಿ ಕೋಟಿ ಖರ್ಚು ಮಾಡಿ ಕನ್ನಡ ಸಮ್ಮೇಳನಗಳನ್ನ ಆಯೋಜನೆ ಮಾಡುತ್ತೆ ಜೊತೆಗೆ ಕನ್ನಡ ಅಭಿವ್ರುದ್ದಿ ಪ್ರಾಧಿಕಾರ ಗಡಿನಾಡ ಉತ್ಸವ ನಡೆಸಿ ಕನ್ನಡದ ವಾತಾವರಣ ನಿರ್ಮಾಣ ಮಾಡ್ತಿವಿ ಅನ್ನುತ್ತೆ. ಇನ್ನೊಂದೆಡೆ ಅದೇ ಸರಕಾರ ಉತ್ಸವ ನಡೆಯೋ ಪ್ರದೇಶಗಳು ಕರ್ನಾಟಕದಲ್ಲೇ ಇಲ್ಲವೆಂಬಂತೆ, ನಮಗೆ ಸಂಬಂಧವಿಲ್ಲದ ಕಾರ್ಯಕ್ರಮವನ್ನ ಆಯೋಜಿಸಿ ನಾಡಿನ ಜನರನ್ನು ನಾಡಿನಿಂದಲೇ ದೂರವಿಡುವಂತೆ ಮಾಡುತ್ತಿದೆ. ಒಟ್ಟಿನಲ್ಲಿ ಇಲ್ಲಿ ಪೋಲಾಗುತ್ತಿರುವುದು ಕರ್ನಾಟಕದ ಜನರ ತೆರಿಗೆ ಹಣ ಮಾತ್ರ.


ಉತ್ಸವದ ವೆಬ್ ವಿಳಾಸ- http://www.gulbargafestival.com/